ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗದ 17ನೇ ಕುಲಸಚಿವರಾಗಿ ವಾರದ ಹಿಂದೆ ಅಧಿಕಾರ ಸ್ವೀಕರಿಸಿದ್ದ ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಮೊಹಮ್ಮದ್ ನಯೀಮ್ ಮೊಮಿನ್ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯಲಹಂಕ ವಲಯದ ಜಂಟಿ ಆಯುಕ್ತರಾಗಿ ನಿಯೋಜಿಸಿ ವರ್ಗಾಯಿಸಲಾಗಿದೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯವರಾಗಿದ್ದು, ಬೀದರ್ ಮತ್ತು ಹಾಸನ ಜಿಲ್ಲೆಗಳಲ್ಲಿ ಸಹಾಯಕ ಆಯುಕ್ತರಾಗಿ, ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್ಸಿ/ಎಸ್ಟಿ ಅನುದಾನ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕು; ಡಿವಿಪಿ ಆಗ್ರಹ
ಮೊಮಿನ್ ಅವರ ಈ ವರ್ಗಾವಣೆಗೆ ಕಾರಣ ತಿಳಿದುಬಂದಿಲ್ಲ. ವಿವಿಯಲ್ಲಿ ಖಾಲಿಯಾಗಿರುವ ಕುಲಸಚಿವ ಹುದ್ದೆಯನ್ನು ಮುಂದಿನ ಆದೇಶದವರೆಗೆ ಪರಿಕ್ಷಾಂಗ ಕುಲಸಚಿವ ರಾಜು ಚೆನ್ನನ್ನವರ್ ಪ್ರಭಾರ ನೆಲೆಯಲ್ಲಿ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.