ದಾವಣಗೆರೆ | ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವ ಹಾಗೂ ಭೋವಿ ಜನೋತ್ಸವ

Date:

Advertisements

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಜುಲೈ 18 ಶುಕ್ರವಾರದಂದು ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳ 16ನೇ ಪಟ್ಟಾಭಿಷೇಕ ಮಹೋತ್ಸವ, 27ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ವಸಂತೋತ್ಸವ ನಿಮಿತ್ತ ಪ್ರತಿಭಾ ಪುರಸ್ಕಾರ, ವಧುವರರ ಸಮಾವೇಶ, ರಕ್ತದಾನ ಶಿಬಿರಗಳನ್ನು ಹಮ್ಮಿಕೊಂಡಿದ್ದು ದಾವಣಗೆರೆ ಜಿಲ್ಲೆಯ ಭೋವಿ ಗುರುಪೀಠದ ಸದ್ಬಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಮಾಜದ ಮುಖಂಡ ಹೆಚ್ ಜಯಣ್ಣ ಕರೆ ನೀಡಿದರು.

ದಾವಣಗೆರೆ ನಗರದ ವೆಂಕಾಭೋವಿ ಕಾಲೋನಿಯ ಸಿದ್ಧರಾಮೇಶ್ವರ ಮಠದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ ನೇತೃತ್ವದಲ್ಲಿ ಜಿಲ್ಲಾ ಮಟ್ಚದ ಪೂರ್ವಭಾವಿ ಸಭೆ ನಡೆಸಲಾಯಿತು. ಮುಖಂಡ ಬಿ.ಟಿ.ಸಿದ್ಧಪ್ಪ ಮಾತನಾಡಿ “ಶ್ರೀಗಳ ಜನ್ಮಕ್ಷೇತ್ರ ದಾವಣಗೆರೆ. ಅವರ ಪ್ರಭಾವಳಿ ರಾಜ್ಯ ದೇಶಾದ್ಯಾಂತ ಹಬ್ಬಿದೆ. ಸಮಾಜದ ಲೋಪದೋಷಗಳನ್ನು ಮರೆತು ಸಮಾಜ ನೆರವೇರಿಸುವ ಚಿತ್ರದುರ್ಗದ ಭೋವಿ ಜನೋತ್ಸವ, ದಾವಣಗೆರೆಯ ಸಿದ್ಧರಾಮೇಶ್ವರ ರಥೋತ್ಸವ ಅರ್ಥಪೂರ್ಣವಾಗಿ ಆಚರಿಸೋಣ” ಎಂದು ತಿಳಿಸಿದರು.‌

1002322530
ಭೋವಿ ಜನೋತ್ಸವ ಅಂಗವಾಗಿ ದಾವಣಗೆರೆಯಲ್ಲಿ ಜರುಗಿದ ಪೂರ್ವಭಾವಿ ಸಭೆ

ಮಹಾನಗರಪಾಲಿಕೆ ಸದಸ್ಯರಾದ ಶಿವಾನಂದ ಮಾತನಾಡಿ “ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಸರ್ವಸಮುದಾಯಗಳೊಂದಿಗೆ, ಸರ್ವಸಮುದಾಯದ ಶ್ರೀಗಳೊಂದಿಗೆ ಸರ್ವ ಪಕ್ಷಗಳೊಂದಿಗೆ ಸಮನ್ವಯ ಕಾಪಾಡಿಕೊಂಡ ಸಂತರಾಗಿದ್ದಾರೆ. ಈ ಕಾರಣದಿಂದ ಯಾವುದೇ ಪಕ್ಷದ ಸರ್ಕಾರವಿದ್ದರು ಭೋವಿ ಸಮಾಜದ ಕಾರ್ಯಗಳು ಸರಾಗವಾಗಿ ನೆರವೇರುತ್ತಿದೆ. ಶ್ರೀಗಳ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯವಾಗಿ ಸೂಕ್ತ ಮಾರ್ಗದರ್ಶನದಿಂದ ಭೋವಿ ಸಮಾಜ ಮುನ್ನೆಲೆಗೆ ಬರುತ್ತಿದೆ” ಎಂದರು.

Advertisements

ನಿವೃತ್ತ ಅಭಿಯಂತರರಾದ ವೆಂಕಟೇಶ ಮಾತನಾಡಿ ಧಾರ್ಮಿಕ ಕಾರ್ಯಕ್ರಮಗಳುನ್ನು ಒಬ್ಬ ಬಂಡವಾಳಶಾಹಿ ನಡೆಸಬಹುದು. ಆದರೆ ಆಣೆ ದುಗ್ಗಾಣೆ ಸೇರಿಸಿಕೊಂಡು ಎಲ್ಲರು ಕೈಜೊಡಿಸಿದಾಗ ಸಾರ್ವಜನಿಕ ಸಮಾರಂಭವಾಗುತ್ತದೆ. ಹಾಗಾಗಿ ಜಿಲ್ಲೆಯ ಪ್ರತಿಯೊಬ್ಬ ಭೋವಿ ಸಮಾಜದ ಬಾಂಧವರು ತನು ಮನ ಧನ ಸಹಕಾರ ನೀಡಬೇಕು” ಎಂದು ವಿನಂತಿಸಿದರು.

ಜಿ.ಪಂ.ಮಾಜಿ ಸದಸ್ಯ ಹರಿಹರ ವೀರಭದ್ರಪ್ಪ ಮಾತನಾಡಿ “ಅಧಿಕಾರ ಶಾಶ್ವತವಲ್ಲ. ನಾವು ಮಾಡುವ ಕಾರ್ಯ ಶಾಶ್ವತ. ಸಮಾಜ ಒಗ್ಗಟಿನ ಮಂತ್ರ ಜಪಿಸಬೇಕು. ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ನಮ್ಮ ಸಮಾಜದ ಹೆಮ್ಮೆಯಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬುದ್ಧ ಬಸವ ಅಂಬೇಡ್ಕರರಂತೆ ಪ್ರಜ್ಞೆ, ಕರುಣೆ ಬೆಳೆಸಿಕೊಳ್ಳಬೇಕು; ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀಗಳು

ಪೂರ್ವಭಾವಿ ಸಭೆಯಲ್ಲಿ ಎಪಿಎಂಸಿ ಮಾಜಿ ಸದಸ್ಯ ಪುಟ್ಟಣ್ಣ, ವಕೀಲ ಗೋಪಾಲ, ಶ್ರೀನಿವಾಸ, ಎ.ಬಿ.ನಾಗರಾಜ, ಶ್ರೀಮತಿ ಉಮಾ ಕುಮಾರ, ಗರಗ ರಾಜಪ್ಪ, ಹರಿಹರ, ಹೊನ್ನಾಳ್ಳಿ, ಜಗಳೂರು, ಚನ್ನಗಿರಿ, ಮಾಯಕೊಂಡ ಕ್ಷೇತ್ರಗಳ ಸಮಾಜದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X