2025ರ ಐದು ತಿಂಗಳಲ್ಲಿ 453 ಮಂದಿ ಹಳಿಗಳ ಮೇಲೆ ಸಾವು: ಬಾಂಬೆ ಹೈಕೋರ್ಟ್‌ಗೆ ರೈಲ್ವೆ ಮಾಹಿತಿ

Date:

Advertisements

2025ರ ಮೊದಲ ಐದು ತಿಂಗಳಲ್ಲಿ 453 ಜನರು ರೈಲ್ವೆ ಹಳಿಗಳ ಮೇಲೆ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರೈಲ್ವೆ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಬಾಂಬೆ ಹೈಕೋರ್ಟ್‌ನ ನಿರ್ದೇಶನದಂತೆ ಅಫಿಡವಿಟ್ ಸಲ್ಲಿಸಿ ಕೇಂದ್ರ ಈ ಮಾಹಿತಿ ನೀಡಿದೆ.

ವಕೀಲೆ ಅನಾಮಿಕಾ ಮಲ್ಹೋತ್ರಾ ಅವರ ಮೂಲಕ ಈ ಅಫಿಡವಿಟ್ ಸಲ್ಲಿಸಲಾಗಿದೆ. ಅತಿಕ್ರಮಣ, ಹಳಿಗಳನ್ನು ದಾಟುವಾಗ ಕೆಲವರು ಸಾವನ್ನಪ್ಪಿದ್ದರೆ, ಇನ್ನು ಕೆಲವರು ಸ್ಥಳೀಯ ರೈಲುಗಳಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಕೇಂದ್ರ ರೈಲ್ವೆ ಹೇಳಿದೆ.

ಇದನ್ನು ಓದಿದ್ದೀರಾ? ಮುಂಬೈ | ಪ್ರಯಾಣಿಕರ ದಟ್ಟಣೆ: ರೈಲಿನಿಂದ ಬಿದ್ದು ಐವರು ಸಾವು

Advertisements

2025ರಲ್ಲಿ ಹಳಿಗಳನ್ನು ದಾಟುವಾಗ 293 ಮಂದಿ ಮತ್ತು ಚಲಿಸುವ ರೈಲುಗಳಿಂದ ಬಿದ್ದು 150 ಮಂದಿ ಸಾವನ್ನಪ್ಪಿದ್ದಾರೆ ಎಂದು ದತ್ತಾಂಶದಲ್ಲಿ ಉಲ್ಲೇಖಿಸಲಾಗಿದೆ. ಕಳೆದ ವರ್ಷ(2024) ಹಳಿಗಳನ್ನು ದಾಟುವಾಗ ಸಾವನ್ನಪ್ಪಿದವರ ಸಂಖ್ಯೆ 674 ಆಗಿದ್ದರೆ, ರೈಲುಗಳಿಂದ ಬಿದ್ದು 387 ಜನರು ಸಾವನ್ನಪ್ಪಿದ್ದಾರೆ. ಹಾಗೆಯೇ 2023ರಲ್ಲಿ, ಹಳಿಗಳನ್ನು ದಾಟುವಾಗ ಒಟ್ಟು 782 ಜನರು ಸಾವನ್ನಪ್ಪಿದ್ದರೆ, 431 ಮಂದಿ ಚಲಿಸುವ ರೈಲುಗಳಿಂದ ಬಿದ್ದು ಸಾವನ್ನಪ್ಪಿದ್ದಾರೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಕೇಂದ್ರ ರೈಲ್ವೆ ಅಫಿಡವಿಟ್ ಸಲ್ಲಿಸಿದೆ. ಜೂನ್ 9ರಂದು ಮುಂಬ್ರಾದಲ್ಲಿ ಎರಡು ಸ್ಥಳೀಯ ರೈಲುಗಳಿಂದ ಎಂಟು ಪ್ರಯಾಣಿಕರು ಬಿದ್ದು ಐವರು ಸಾವನ್ನಪ್ಪಿದ ಘಟನೆಯ ನಂತರ ಹೈಕೋರ್ಟ್ ವರದಿ ಕೇಳಿದೆ.

ಮುಂಬ್ರಾ ಘಟನೆಯ ತನಿಖೆಗಾಗಿ ತಂಡವನ್ನು ರಚಿಸಲಾಗಿದ್ದು ತನಿಖೆ ಇನ್ನೂ ಮುಂದುವರೆದಿದೆ ಎಂದು ಕೇಂದ್ರ ರೈಲ್ವೆ ನ್ಯಾಯಾಲಯಕ್ಕೆ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X