ಉಡುಪಿ | ಮೀನುಗಾರಿಕೆ ಸಚಿವರಿಂದ ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ಧನ ವಿತರಣೆ

Date:

Advertisements

ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಡಿಸ್ಕೋ ನಾಡದೋಣಿಗೆ ಜುಲೈ 11 ರ ಶುಕ್ರವಾರ ಸೈಂಟ್ ಮೇರೀಸ್ ದ್ವೀಪದಿಂದ ಸುಮಾರು 1 ಕಿ.ಮೀ.ದೂರದಲ್ಲಿ ಬೃಹತ್ ತೆರೆಯೊಂದು ದೋಣಿಗೆ ಬಡಿದ ಪರಿಣಾಮ ದೋಣಿ ಮಗುಚಿ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟ ಉಡುಪಿ ಪಿತ್ರೋಡಿಯ ಮೃತ ನೀಲಾಧರ ಜಿ ತಿಂಗಳಾಯ ರವರ ಮನೆಗೆ ಮೀನುಗಾರಿಕಾ ಸಚಿವ ಮಂಕಾಳ ಎಸ್ ವೈದ್ಯ ರವರು ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀನುಹಿಡಿಯುವ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಕಾಲು ಜಾರಿ ಸಮುದ್ರದಲ್ಲಿ ಬಿದ್ದು, ಅಸ್ವಸ್ಥರಾಗಿದ್ದ ನೀಲಾಧರ ಜಿ ತಿಂಗಳಾಯ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಸಹ ಉಳಿಸಿಕೊಳ್ಳಲಾಗಲಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೃತ ಕುಟುಂಬದ ಮನೆಗೆ ಭೇಟಿ ನೀಡಿ ಅಗತ್ಯ ಸಹಕಾರ ನೀಡಿದ್ದಾರೆ.

ಭಟ್ಕಳ, ಮುರ್ಡೇಶ್ವರ ಸೇರಿದಂತೆ ಉಡುಪಿಯಲ್ಲಿಯೂ ಸಹ ಇಂತಹ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಅತೀವ ನೋವು ತಂದಿದೆ ಎಂದ ಅವರು, ಮೃತ ಮೀನುಗಾರರ ಕುಟುಂಬಕ್ಕೆ ಸರಕಾರದ ವತಿಯಿಂದ ಎಲ್ಲಾ ರೀತಿಯ ಸಹಾಯ ನೀಡಲಾಗುವುದು ಎಂದರು. 6 ಲಕ್ಷ ರೂ. ಇದ್ದ ಪರಿಹಾರದ ಹಣವನ್ನು ವಿಶ್ವ ಮೀನುಗಾರಿಕೆ ದಿನದಂದು 10 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇಂದು ಪರಿಹಾರದ ಹಣವನ್ನು ಕುಟುಂಬದವರಿಗೆ ವಿತರಿಸಿದ್ದೇವೆ ಹಾಗೂ ಪ್ರಪ್ರಥಮಬಾರಿಗೆ ದೋಣಿ, ಇಂಜಿನ್, ಬಲೆಯ ಖರೀದಿಗೆ ಸಹ 5 ಲಕ್ಷ ರೂ. ನೀಡಲಾಗಿದೆ. ಕರಾವಳಿ ಭಾಗದಲ್ಲಿ ಇಂತಹ ದುರಂತ ಮತ್ತೆ ಮರುಕಳಿಸದಂತೆ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಾಲಕಾಲಕ್ಕೆ ಹವಾಮಾನ ಇಲಾಖೆಯಿಂದ ನೀಡಲಾಗುವ ಮುನ್ಸೂಚನೆಗಳನ್ನು ಪಾಲಿಸಬೇಕು ಎಂದ ಅವರು, ಸಮುದ್ರ ಪ್ರಕ್ಷಬ್ಧವಾಗಿರುವುದರಿಂದ ಕರಾವಳಿ ಭಾಗದ ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಎಸ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X