ಆರ್‌ಪಿಎಫ್‌ ಕಾನ್‌ಸ್ಟೆಬಲ್‌ನಿಂದ ಹತ್ಯೆ : ಬೀದರ್‌ನ ಸೈಫುದ್ದೀನ್ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Date:

Advertisements
  • ಪರಿಹಾರ ನೀಡಲು ಸಮ್ಮತಿ ಸೂಚಿಸಿದ ಸಿಎಂ: ಸಚಿವ ಈಶ್ವರ್ ಖಂಡ್ರೆ
  • ದೇಶವನ್ನೇ ಬೆಚ್ಚಿ ಬೀಳಿಸಿದ್ದ ಘಟನೆಯಲ್ಲಿ ನಾಲ್ವರ ಹತ್ಯೆ, ಒಬ್ಬರು ಬೀದರ್

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಆರ್‌ಪಿಎಫ್‌ ಕಾನ್‌ಸ್ಟೆಬಲ್‌ ಚೇತನ್ ಸಿಂಗ್‌ನಿಂದ ಕೊಲ್ಲಲ್ಪಟ್ಟ ಬೀದರ್ ತಾಲೂಕಿನ ಹಮಿಲಾಪುರ್ ಗ್ರಾಮದ ಸೈಯದ್ ಸೈಫುದ್ದೀನ್ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರ ₹10 ಲಕ್ಷ ಪರಿಹಾರ ನೀಡಲಿದೆ.

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅರಣ್ಯ ಮತ್ತು ಪರಿಸರ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ‘ಚಲಿಸುತ್ತಿದ್ದ ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲುಗಾಡಿಯಲ್ಲಿ ಆರ್‌ಪಿಎಫ್‌ ಪೇದೆ ಚೇತನ್ ಸಿಂಗ್ ಕ್ಷುಲ್ಲಕ ಕಾರಣಕ್ಕೆ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಬೀದರ್ ಜಿಲ್ಲೆಯ ಬೀದರ್ ಗಾದಗಿ ಬಳಿಯ ಹಮಿಲಾಪುರದ ಮುಗ್ದ ಪ್ರಯಾಣಿಕ ಸೈಯದ್ ಸೈಫುದ್ದೀನ್ ಕುಟುಂಬದವರಿಗೆ ₹10 ಲಕ್ಷ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿಸಿದ್ದಾರೆ. ಮೃತರ ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ. ಈ ನೋವಿನ ಸಂದರ್ಭದಲ್ಲಿ ನಾವು ಅವರ ಜೊತೆಗೆ ಇರುತ್ತೇವೆ.” ಎಂದು ತಿಳಿಸಿದ್ದಾರೆ.

ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲಲ್ಲಿ ಕಳೆದ ಸೋಮವಾರ ಬೆಳಗ್ಗೆ ಐದು ಗಂಟೆಯ ಸುಮಾರಿಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ತನ್ನ ಸ್ವಯಂಚಾಲಿತ ರೈಫಲ್‌ನಿಂದ ಗುಂಡು ಹಾರಿಸಿ, ನಾಲ್ವರನ್ನು ಕೊಂದಿದ್ದನು.

Advertisements
bidar victim
ಸೈಯದ್ ಸೈಫುದ್ದೀನ್

ಆರ್‌ಪಿಎಫ್ ಸಹೋದ್ಯೋಗಿಯಾಗಿದ್ದ ಎಎಸ್‌ಐ ಟಿಕಾ ರಾಮ್ ಮೀನಾ, ಅಬ್ದುಲ್ ಕದಿರ್, ಅಸ್ಗರ್ ಕೈ, ಸೈಯದ್ ಸೈಫುದ್ದೀನ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದನು.

ಇದನ್ನು ಓದಿದ್ದೀರಾ? ಜೈಪುರ-ಮುಂಬೈ ಎಕ್ಸ್‌ಪ್ರೆಸ್ ರೈಲ್ ಹತ್ಯೆ: ‘ಗಡ್ಡ ನೋಡಿ ಗುಂಡಿಟ್ಟು ಸಾಯಿಸಲಾಗಿದೆ’ ಎಂದ ಸಹೋದರ

ಸೈಯದ್ ಸೈಫುದ್ದೀನ್ ಹೈದರಾಬಾದ್‌ನ ಮೊಬೈಲ್ ಸರ್ವಿಸ್ ಅಂಗಡಿ ಒಂದರಲ್ಲಿ ಕೆಲಸ ಮಾಡಿಕೊಂಡು, ಅಲ್ಲೇ ನೆಲೆಸಿದ್ದರು. ಅಂಗಡಿಯ ಮಾಲೀಕರ ಜೊತೆಗೆ ಅಜ್ಮೀರ್‌ಗೆ ತೆರಳಿ ವಾಪಸ್ ಮುಂಬೈಗೆ ಬರುವ ವೇಳೆ ಈ ದುರ್ಘಟನೆ ನಡೆದಿತ್ತು. ಇವರಿಗೆ ಪತ್ನಿ, ಮೂವರು ಹೆಣ್ಣು ಮಕ್ಕಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X