ಬೀದರ್‌ | ಆಹಾರ ಸುರಕ್ಷತೆ, ಗುಣಮಟ್ಟ ಪರೀಕ್ಷಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ಬೀದರ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆ ಹೋಟೆಲ್‌, ಉಪಹಾರ ಕೇಂದ್ರ, ಕುಡಿಯುವ ನೀರಿನ ಘಟಕಗಳು ತಲೆ ಎತ್ತಿದ್ದು, ಆಹಾರ ಸುರಕ್ಷತೆ ನಿಯಮಗಳೇ ಅನ್ವಯವಾಗುತ್ತಿಲ್ಲ. ಆದರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಕಂಡೂ ಕಾಣದಂತೆ ಮೌನವಹಿಸಿದ್ದಾರೆ ಎಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಗುರುದಾಸ ಅಮದಾಲಪಾಡ ದೂರಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಮಂಗಳವಾರ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ʼಜಿಲ್ಲಾ ಹಾಗೂ ತಾಲ್ಲೂಕಿನ ಪ್ರತಿಯೊಂದು ಬೀದಿಯಲ್ಲಿ ತಿಂಡಿ ತಿನಿಸುಗಳು ಹಾಗೂ ಹೋಟೆಲ್‌ಗಳಲ್ಲಿ ಸಿದ್ಧಪಡಿಸುವ ಉಪಹಾರ ಗುಣಮಟ್ಟ ಇಲ್ಲ. ಇನ್ನು ನೈರ್ಮಲ್ಯ ಕಾಪಾಡದೇ ಇರುವುದು ಕಂಡು ಬರುತ್ತಿದೆ. ಇದನ್ನು ಪರೀಕ್ಷಿಸುವುದು ಜಿಲ್ಲಾ ಅಂಕಿತಾಧಿಕಾರಿಗಳ ಕರ್ತವ್ಯವಿದೆ. ಆದರೆ, ಕಲಬೆರಕೆ ಆಹಾರ ಪರೀಕ್ಷೆಗೆ ಒಳಪಡಿಸಿ ಕ್ರಮಕೈಗೊಳ್ಳದೆ ಹೋಟೆಲ್ ಮಾಲಿಕರ ಜೊತೆ ಕೈಜೋಡಿಸಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆʼ ಎಂದು ಆರೋಪಿಸಿದ್ದಾರೆ.

Advertisements

ʼಹೋಟೆಲ್ ವ್ಯಾಪಾರಿಗಳು, ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಬೀದಿ ಬದಿಯ ತಿಂಡಿ ತಿನಿಸು ತಯ್ಯಾರಿಸುವ ಸಣ್ಣಪುಟ್ಟ ವ್ಯಾಪಾರಿಗಳು ಆಹಾರ ಸುರಕ್ಷತೆಯ ಇಲಾಖೆಯಿಂದ ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಆದರೆ ಹಲವು ಕಡೆಯಲ್ಲಿರುವ ತಿಂಡಿ ತಿನಿಸು ತಯಾರಿಕಾ ಅಂಗಡಿಗಳು ಆಹಾರ ಸುರಕ್ಷತೆ ನಿಯಮಗಳು ಗಾಳಿಗೆ ತೂರಿ ಮನಬಂದಂತೆ ಆಹಾರ ಸಿದ್ಧಪಡಿಸುತ್ತಿದ್ದಾರೆʼ ಎಂದು ದೂರಿದರು.

ಇದನ್ನೂ ಓದಿ : ಬೀದರ್‌ | ಪ್ರೀತಿಸುವಂತೆ ಯುವಕನಿಂದ ಕಿರುಕುಳ : ಅಪ್ರಾಪ್ತೆ ನೇಣಿಗೆ ಶರಣು

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಇಲಾಖೆ ಅಂಕಿತಾಧಿಕಾರಿ ಸಂತೋಷ ಕಾಳೆ ಅವರ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಅಸುರಕ್ಷಿತ ಆಹಾರ ಹಾಗೂ ನೀರು ಸೇವಿಸಿ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X