ದೆಹಲಿ | ಐದು ಶಾಲೆಗಳಿಗೆ ಬಾಂಬ್ ಬೆದರಿಕೆ: ಮೂರು ದಿನಗಳಲ್ಲಿ ಹತ್ತನೇ ಘಟನೆ

Date:

Advertisements

ದೆಹಲಿಯ ಐದು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಅಧಿಕಾರಿಗಳು ಆವರಣವನ್ನು ತೆರವುಗೊಳಿಸಿದ್ದು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ದಿನಗಳಲ್ಲಿ ಹೀಗೆಯೇ ಹತ್ತು ಬಾರಿ ಬಾಂಬ್ ಬೆದರಿಕೆ ಇಮೇಲ್, ಕರೆ ಬಂದಿದೆ ಎಂದು ವರದಿಯಾಗಿದೆ.

ದ್ವಾರಕಾದ ಸೇಂಟ್ ಥಾಮಸ್ ಶಾಲೆಯನ್ನು ಸ್ಫೋಟಿಸುವುದಾಗಿ ಇಮೇಲ್ ಬಂದಿದ್ದು ಈ ಬಗ್ಗೆ ಬೆಳಿಗ್ಗೆ 5:26ಕ್ಕೆ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ. ವಸಂತ್ ಕುಂಜ್‌ನ ವಸಂತ್ ವ್ಯಾಲಿ ಶಾಲೆಯಲ್ಲಿ ಬೆಳಿಗ್ಗೆ 6.30ಕ್ಕೆ, ಹೌಜ್ ಖಾಸ್‌ನಲ್ಲಿರುವ ಮದರ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಬೆಳಿಗ್ಗೆ 8.12ಕ್ಕೆ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಗ್ಲೋಬಲ್ ಶಾಲೆಯಲ್ಲಿ ಬೆಳಿಗ್ಗೆ 8.11ಕ್ಕೆ ಬೆದರಿಕೆ ಇಮೇಲ್‌ಗಳು ಬಂದಿವೆ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಕೆನಡಾ ಪ್ರಜೆ ವಶಕ್ಕೆ

Advertisements

ಲೋಧಿ ಎಸ್ಟೇಟ್‌ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯಕ್ಕೂ ಬೆದರಿಕೆ ಇಮೇಲ್ ಬಂದಿದೆ. ಶಾಲೆಯನ್ನು ಸಂಪೂರ್ಣ ಪರಿಶೀಲಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ ಎನ್ನಲಾಗಿದೆ. ಸದ್ಯ ಬಾಂಬ್ ಬೆದರಿಕೆ ಹಿನ್ನೆಲೆ ಈ ಶಾಲೆಗಳನ್ನು ಮುಚ್ಚಲಾಗಿದೆ.

ಸೇಂಟ್ ಥಾಮಸ್ ಶಾಲೆಗೆ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡು ಬಾರಿ ಬಾಂಬ್ ಬೆದರಿಕೆ ಬಂದಿದೆ. ಒಟ್ಟಾರೆಯಾಗಿ, ನಗರದ ಒಂಬತ್ತು ಶಾಲೆಗಳಿಗೆ 10 ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಸದ್ಯ ಹುಸಿ ಬಾಂಬ್ ಬೆದರಿಕೆಯೇ ಎಂಬುದು ಸ್ಪಷ್ಟವಾಗಿಲ್ಲ, ಸ್ಥಳದ ಪರಿಶೀಲನೆ, ತನಿಖೆ ನಡೆಯುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X