ಅಹಂಕಾರ, ಅತಿರೇಕ ಹೆಚ್ಚಾದಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ: ಪ್ರಧಾನಿ ವಿರುದ್ಧ ಜೈರಾಮ್ ರಮೇಶ್ ಕಿಡಿ

Date:

Advertisements

ಒಬ್ಬ ಮನುಷ್ಯನ ಅಹಂಕಾರ ಮತ್ತು ಅತಿರೇಕ ಪ್ರಾಮುಖ್ಯತೆ ಪಡೆದುಕೊಂಡಾಗ ವಿಜ್ಞಾನ, ಪಾರದರ್ಶಕತೆಗೆ ಹಿನ್ನಡೆ ಸಂಭವಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇಂದು(ಆಗಸ್ಟ್ 2) 9ನೇ ಚಿರತೆ ಮೃತಪಟ್ಟ ಬಗ್ಗೆ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಸಾವುಗಳು ನಿರೀಕ್ಷಿತ ಮರಣ ಎಂಬ ವಾದವು ‘ಸಂಪೂರ್ಣ ಅಸಂಬದ್ಧವಾಗಿದೆ’ ಮತ್ತು ಅಂತಾರಾಷ್ಟ್ರೀಯ ಚಿರತೆ ತಜ್ಞರು ಇದನ್ನು ತಳ್ಳಿಹಾಕಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದರು.

Advertisements

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಇಲ್ಲಿಯವರೆಗೂ ಒಟ್ಟು 9 ಚಿರತೆಗಳು ಸಾವನ್ನಪ್ಪಿವೆ. ಇವುಗಳಲ್ಲಿ ಆರು ಚಿರತೆಗಳು ಮತ್ತು ಮೂರು ಮರಿಗಳು ಸೇರಿವೆ. ಇಂದು ಸಾವನ್ನಪ್ಪಿದ ಚಿರತೆ ಮಾರ್ಚ್‌ನಿಂದ ಸಾವನ್ನಪ್ಪಿದ ಆರನೇ ಚಿರತೆಯಾಗಿದೆ.

ಏಳು ಗಂಡು, ಆರು ಹೆಣ್ಣು ಮತ್ತು ಒಂದು ಹೆಣ್ಣು ಮರಿ ಒಳಗೊಂಡ ಹದಿನಾಲ್ಕು ಚಿರತೆಗಳನ್ನು ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದೆ. ವನ್ಯ ಜೀವಿ ಪಶುವೈದ್ಯರು ಮತ್ತು ನಮೀಬಿಯಾದ ತಜ್ಞರನ್ನು ಒಳಗೊಂಡ ತಂಡ ಚಿರತೆಗಳ ಆರೋಗ್ಯವನ್ನು ಮೇಲ್ವಿಚಾರಣೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ದ್ವೇಷ ಭಾಷಣ ನಿಲ್ಲಿಸಿ, ಹೆಚ್ಚು ಸಿಸಿ ಟಿವಿ ಅಳವಡಿಸಿ: ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಳೆದ ವರ್ಷ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಚಿರತೆಗಳನ್ನು ಕರೆತಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿತ್ತು.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಜೆ ಬಿ ಪರ್ದಿವಾಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಪೀಠವು ಇದನ್ನು ಸರ್ಕಾರವು ಪ್ರತಿಷ್ಠೆಯ ವಿಷಯವಾಗಿ ಏಕೆ ತೆಗೆದುಕೊಳ್ಳಬೇಕು ಎಂದು ಪ್ರಶ್ನಿಸಿದೆ. “ಚಿರತೆಗಳನ್ನು ಒಂದೇ ಸ್ಥಳದಲ್ಲಿ ಇರಿಸುವ ಬದಲು, ಅವು ಯಾವುದೇ ರಾಜ್ಯ ಅಥವಾ ಯಾವುದೇ ಸರ್ಕಾರದ ಅಡಿಯಲ್ಲಿರಲಿ. ಅವುಗಳಿಗೆ ಒಂದು ಅಥವಾ ಹೆಚ್ಚಿನ ಆವಾಸಸ್ಥಾನಗಳನ್ನು ಏಕೆ ನಿರ್ಮಿಸಲು ಸಾಧ್ಯವಿಲ್ಲ” ಎಂದು ಪ್ರಶ್ನಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X