ಯಾದಗಿರಿ | ಮಾಚನೂರ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ

Date:

Advertisements

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರ ಗ್ರಾಮದ ಪ್ರಗತಿಪರ ರೈತ ರಮೇಶ್ ಅವರು ಹತ್ತಿ ಬೆಳೆದಿರುವ ಜಮೀನಿನಲ್ಲಿ ಕಲಿಕೆ ಟಾಟಾ ಟ್ರಸ್ಟ್ಸ್, ಕೃಷಿ ವಿಶ್ವ ವಿದ್ಯಾಲಯ ರಾಯಚೂರು ಹಾಗೂ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರವು ‘ಹತ್ತಿ ಬೆಳೆ ಕ್ಷೇತ್ರೋತ್ಸವ’ ಕಾರ್ಯಕ್ರಮ ನಡೆಸಿವೆ.

ಕಾರ್ಯಕ್ರಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಬೇಸಾಯ ತಜ್ಞ ಡಾ.ಕುಮಾರ ಸ್ವಾಮಿ ಹಿರೇಮಠ ಅವರು ಹತ್ತಿ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ, ಬಲೆ, ನೀಲಿ ಅಂಟು ಹಾಗೂ ಹಳದಿ ಅಂಟುಗಳ ಬಗ್ಗೆ ವಿವರಿಸಿದರು.

ಕಲಿಕೆ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಶಾಂತು ಗೌಡ ಬಿರದಾರ್ ಅವರು ಕಲಿಕೆ ಜೀವನೋಪಾಯ ಕಾರ್ಯಕ್ರಮದ ಗುರಿ ಮತ್ತು ಉದೇಶಗಳ ಕುರಿತು ತಿಳಿಸಿದರು. ರೈತ ಸಂಪರ್ಕ ಕೇಂದ್ರದ ತಾಂತ್ರಿಕ ಅಧಿಕಾರಿ ಮಾಂತೇಶ್ ಅವರು ವಡಗೇರ ಅವರು ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

Advertisements

ಕಾರ್ಯಕ್ರಮದಲ್ಲಿ ಕುಮಾರ್. ಎಸ್.ತೆಳಿಗೇರಿ, ಮಂಜುನಾಥ ವಿಶ್ವಕರ್ಮ, ಶ್ರೀಮತಿ ಅನುರಾಧಾ ಮತ್ತು ಕುಮಾರ್.ಎಸ್, ರಫಿ ಕೊಂಕಲ್, ಬಾಲಪ್ಪ, ಮಾಚನೂರ, ಸೈದು ವಡಗೇರ, ಮಹಾದೇವ, ಮಲ್ಲೇಶ್, ಹಣಮಂತ ಬಿಳ್ಹಾರ, ಭೀರಲಿಂಗ ಕುರಕುಂದಿ, ಮಾಂತೇಶ್ ಬಿಳ್ಹಾರ, ಮಾಚನೂರ ಮತ್ತು ಹಲವಾರು ಗ್ರಾಮದ ರೈತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X