ಮತ್ತೆ ಒಡತಿ ಕೈ ಸೇರಿತು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ!

Date:

Advertisements

ಸುಮಾರು ಮೂರು ವರ್ಷಗಳ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಈಗ ಮತ್ತೆ ಒಡತಿ ಕೈ ಸೇರಿದೆ ಘಟನೆ ಕೇರಳದ ಮಲಪ್ಪುರಂನ ತ್ರಿಕ್ಕಲಗೊಂಡ್‌ನಲ್ಲಿ ನಡೆದಿದೆ. ಕಾಗೆ ಹೊತ್ತೊಯ್ದ ಬಳೆ ಸಿಗಲು ಸಾಧ್ಯವೇ ಇಲ್ಲ ಎಂದುಕೊಂಡಿದ್ದ ಕುಟುಂಬಕ್ಕೆ ಆಶ್ಚರ್ಯ ಉಂಟಾಗಿದೆ. ಅದೂ ಮೂರು ವರ್ಷಗಳ ಬಳಿಕ!

ರುಕ್ಮಿಣಿ ಎಂಬವರು ಮೂರು ವರ್ಷಗಳ ಹಿಂದೆ ಕೆಲಸ ಮಾಡುತ್ತಿರುವಾಗ ಒಂದೂವರೆ ಪವನ್ ಅಂದರೆ ಸುಮಾರು 12 ಗ್ರಾಂ ಚಿನ್ನದ ಬಳೆಯನ್ನು ತೆಗೆದು ಬದಿಗಿಟ್ಟು ಕೆಲಸ ಮಾಡುತ್ತಿದ್ದರು. ಆದರೆ ದಿಢೀರ್ ಆಗಿ ಬಂದ ಕಾಗೆ ಬಳೆಯನ್ನು ಹೊತ್ತು ಹಾರಿತ್ತು. ಕೆಲವು ದಿನಗಳ ಕಾಲ ಬಳೆಯ ಹುಡುಕಾಟ ನಡೆಸಿದ್ದ ರುಕ್ಮಿಣಿ ಕುಟುಂಬ ಇನ್ನು ಬಳೆ ನಮಗೆ ಸಿಗದು ಎಂದು ಕೈಚೆಲ್ಲಿತ್ತು.

ಇದನ್ನು ಓದಿದ್ದೀರಾ? ಚೀನಾ | ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ‘ಡ್ರೋನ್’ – ವಿಡಿಯೋ ವೈರಲ್

Advertisements

ಆದರೆ ಅದೇ ಚಿನ್ನದ ಬಳೆ ರುಕ್ಮಿಣಿ ಮನೆಯಿಂದ ಸುಮಾರು 50 ಮೀಟರ್ ದೂರದಲ್ಲಿರುವ ಅನ್ವರ್ ಸಾದತ್ ಎಂಬವರ ಮನೆಯ ಹಿತ್ತಲ ಮಾವಿನ ಮರದಲ್ಲಿದ್ದ ಕಾಗೆ ಗೂಡಿನಲ್ಲಿ ಸಿಕ್ಕಿದೆ. ಮಾವಿನ ಹಣ್ಣನ್ನು ಕೊಯ್ಯಲೆಂದು ಮರವನ್ನು ಕುಲುಕಿಸಿದಾಗ ಚಿನ್ನ ಕೆಳಕ್ಕೆ ಬಿದ್ದಿದೆ ಎಂದು ವರದಿಯಾಗಿದೆ.

ತಮಗೆ ಸಿಕ್ಕ ಈ ಚಿನ್ನವನ್ನು ಇಟ್ಟುಕೊಳ್ಳದೆ ಪ್ರಾಮಾಣಿಕತೆ ಮೆರೆದ ಅನ್ವರ್ ಸಾದತ್ ಕುಟುಂಬ ತ್ರಿಕ್ಕಲಂಗೋಡ್ ಸಾರ್ವಜನಿಕ ಗ್ರಂಥಾಲಯಕ್ಕೆ ನೀಡಿದ್ದಾರೆ. ಇದರ ಜಾಹೀರಾತು ನೋಡಿದ ರುಕ್ಮಿಣಿ ಪತಿಯೊಂದಿಗೆ ಗ್ರಂಥಾಲಯಕ್ಕೆ ಹೋಗಿ ಬಳೆ ತನ್ನದೇ ಎಂದು ಖಚಿತಪಡಿಸಿಕೊಂಡಿದ್ದಾರೆ.

ಚಿನ್ನ1

ಹಾಗೆಯೇ ಈ ಚಿನ್ನ ಪತ್ತೆಹಚ್ಚಿದವರ ಕೈಯಿಂದಲೇ ಪಡೆಯಬೇಕು ಎಂದು ಮನವಿ ಮೇರೆಗೆ ಊರಿನವರು ಅನ್ವರ್ ಸಾದತ್ ಕೈಯಿಂದಲೇ ರುಕ್ಮಿಣಿ ಅವರಿಗೆ ಬಳೆಯನ್ನು ಕೊಡಿಸಿದ್ದಾರೆ. ಬಳೆ ತುಂಡಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ರುಕ್ಮಿಣಿ, “ಈ ಬಳೆ ಮತ್ತೆ ನನಗೆ ಸಿಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ಸಿನಿಮಾದಂತೆ ಸಂಭವಿಸಿದೆ” ಎಂದು ಹೇಳಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X