ಬೆಂ-ಮೈ ಎಕ್ಸ್‌ಪ್ರೆಸ್‌ ವೇ | ನಿರ್ಬಂಧಿತ ವಾಹನ ಸಂಚಾರ; ಮೊದಲ ದಿನವೇ ₹68,500 ದಂಡ ಸಂಗ್ರಹ

Date:

Advertisements
  • ಎಕ್ಸ್‌ಪ್ರೆಸ್‌ ವೇ ಪ್ರವೇಶಿಸುವ ನಿರ್ಬಂಧಿತ ವಾಹನಗಳಿಗೆ ₹500 ದಂಡ
  • ನಿರ್ಬಂಧಿತ ವಾಹನಗಳು ಸರ್ವೀಸ್‌ ರಸ್ತೆ ಬಳಸಿ ಪ್ರಯಾಣಿಸುವಂತೆ ಸೂಚನೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳು ಹೆಚ್ಚಾದ ಕಾರಣ ದ್ವಿಚಕ್ರ, ತ್ರಿಚಕ್ರ, ಟ್ಯಾಕ್ಟರ್ ಸೇರಿದಂತೆ ಇನ್ನಿತರ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಈ ನಿಯಮವು ಆಗಸ್ಟ್‌ 1ರಿಂದ ಜಾರಿಯಾಗಿದ್ದು, ಮೊದಲು ದಿನವೇ ಎಕ್ಸ್‌ಪ್ರೆಸ್‌ ವೇನಲ್ಲಿ ಸಂಚರಿಸಿ ನಿರ್ಬಂಧಿತ ವಾಹನಗಳಿಂದ ₹68,500 ದಂಡ ಸಂಗ್ರಹಿಸಲಾಗಿದ್ದು, ಒಟ್ಟು 137 ಪ್ರಕರಣ ದಾಖಲಾಗಿವೆ.

ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಚಾರ ನಡೆಸುತ್ತಿರುವ ವಾಹನಗಳನ್ನು ತಡೆದು ಸರ್ವೀಸ್‌ ರಸ್ತೆಯಲ್ಲಿ ಪ್ರಯಾಣಿಸುವಂತೆ ಪೊಲೀಸರು ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸವಾರರಿಗೆ ಮಾಹಿತಿ ನೀಡುತ್ತಿದ್ದಾರೆ. ಅಲ್ಲದೇ, ಎಕ್ಸ್‌ಪ್ರೆಸ್‌ ವೇ ಪ್ರವೇಶ ಕೇಂದ್ರ ಮತ್ತು ಟೋಲ್ ಗೇಟ್‌ಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರ ನಿಷೇಧದ ಬಗ್ಗೆ ಬೋರ್ಡ್‌ ಹಾಕಲಾಗಿದೆ.

ಸ್ಕೂಟರ್‌ಗಳು, ಇತರ ದ್ವಿಚಕ್ರ ವಾಹನಗಳು, ಇ-ಕಾರ್ಟ್‌ಗಳು, ಇ-ರಿಕ್ಷಾಗಳು, ತ್ರಿಚಕ್ರ ವಾಹನಗಳು, ಮೋಟಾರುರಹಿತ ವಾಹನಗಳು, ಟ್ರ್ಯಾಕ್ಟರ್‌ಗಳು, ಮಲ್ಟಿ-ಆಕ್ಸಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಹಾಗೂ ಕ್ವಾಡ್ರಿಸೈಕಲ್‌ಗಳ ಸಂಚಾರಕ್ಕೆ ನಿರ್ಬಂಧಿಸಲು ಜುಲೈ 12ರಂದು ಎನ್‌ಎಚ್‌ಎಐ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 1 ರಿಂದ ಎಕ್ಸ್‌ಪ್ರೆಸ್‌ ವೇಯಲ್ಲಿ ಸಂಚರಿಸಲು ನಿರ್ಬಂಧಿಸಲಾಗಿದೆ.

Advertisements

ನಿರ್ಬಂಧದ ಅರಿವಿಲ್ಲದೆ ಅನೇಕ ದ್ವಿಚಕ್ರ ವಾಹನ ಸವಾರರು ಪಂಚಮುಖಿ ಗಣೇಶ ದೇವಸ್ಥಾನದ ಬಳಿ ನೈಸ್ ರಸ್ತೆ ಜಂಕ್ಷನ್ ನಂತರ ನಗರದ ಹೊರವಲಯದಲ್ಲಿ ಪ್ರಾರಂಭವಾಗುವ ಎಕ್ಸ್‌ಪ್ರೆಸ್‌ ವೇಗೆ ಪ್ರವೇಶಿಸಲು ಪ್ರಯತ್ನಿಸಿದರು. ಅವರನ್ನು ಪೊಲೀಸರು ಮತ್ತು ಎನ್‌ಎಚ್‌ಎಐ ಸಿಬ್ಬಂದಿ ತಡೆದು ಸರ್ವೀಸ್ ರಸ್ತೆಯಲ್ಲಿ ತೆರಳುವಂತೆ ಸೂಚನೆ ನೀಡಿದರು.

“ನಿಷೇಧವು ಮಂಗಳವಾರದಿಂದ ಜಾರಿಗೆ ಬಂದಿದೆ. ಅನೇಕ ವಾಹನ ಬಳಕೆದಾರರಿಗೆ ವಿಶೇಷವಾಗಿ ದ್ವಿಚಕ್ರ ವಾಹನ ಸವಾರರಿಗೆ ಈ ಸಂಚಾರ ನಿರ್ಬಂಧದ ಬಗ್ಗೆ ತಿಳಿದಿರಲಿಲ್ಲ. ನಿಷೇಧದ ಬಗ್ಗೆ ಅವರಿಗೆ ತಿಳಿಸಿದ್ದೇವೆ” ಎಂದು ಎನ್‌ಎಚ್‌ಎಐ ಸಿಬ್ಬಂದಿ ಹೇಳಿದರು.

ಇದೇ ವೇಳೆ, ದ್ವಿಚಕ್ರ ವಾಹನ ಸವಾರರು ಮತ್ತು ಗೂಡ್ಸ್ ಆಟೋಗಳ ಚಾಲಕರು ನಿರ್ಬಂಧದ ಬಗ್ಗೆ ತಮ್ಮ ಆಕ್ರೋಶವನ್ನು ಹೊರಹಾಕಿದರು. ನಿಷೇಧವು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆಯನ್ನು ಹೇಗೆ ತಡೆಯುತ್ತದೆ ಎಂದು ಪೊಲೀಸರನ್ನು ಪ್ರಶ್ನಿಸಿದರು.

“ದ್ವಿಚಕ್ರ ವಾಹನಗಳು ಮತ್ತು ಇತರ ವಾಹನಗಳು ಸರ್ವಿಸ್ ರಸ್ತೆಯನ್ನು ಬಳಸಲು ಹೇಳುತ್ತಿದ್ದಾರೆ. ಆದರೆ, ಸರ್ವೀಸ್ ರಸ್ತೆ ಎಲ್ಲಿದೆ? ಸರ್ವೀಸ್‌ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಲ್ಲಿ ಸಂಚರಿಸುವುದು ಕಷ್ಟಕರವಾಗಿದೆ” ಎಂದು ಪ್ರಯಾಣಿಕ ಪ್ರಕಾಶ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ. 140 ಹೆಚ್ಚಳ

“ಎಕ್ಸ್‌ಪ್ರೆಸ್‌ ವೇ ಪ್ರವೇಶಿಸುವ ನಿರ್ಬಂಧಿತ ವಾಹನಗಳಿಗೆ 500 ರೂಪಾಯಿ ದಂಡ ವಿಧಿಸಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಇಂದಿನಿಂದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶ ಮತ್ತು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮಂಗಳವಾರ 137 ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಾಗಿವೆ. ₹68,500 ದಂಡ ವಿಧಿಸಲಾಗಿತದೆ. ಪ್ರವೇಶ ನಿರ್ಬಂಧವಿರುವ ಕಾರಣ ಸದರಿ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಸಬೇಕಾಗಿ ವಿನಂತಿ” ಎಂದು ರಾಮನಗರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಟ್ವೀಟ್​ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X