ಗಂಡು ಮಗು ಬೇಕೆಂಬ ಹಪಾಹಪಿ; 7 ವರ್ಷದ ಮಗಳನ್ನು ಕಾಲುವೆಗೆ ಎಸೆದ ವಿಕೃತ ತಂದೆ

Date:

Advertisements

ಗುಂಡು ಮಗು ಬೇಕೆಂಬ ಪುರುಷಾಹಂಕಾರದ ಹಪಾಹಪಿಯಿಂದ ವಿಕೃತ ತಂದೆಯೊಬ್ಬ ತನ್ನ 7 ವರ್ಷದ ಮಗಳನ್ನು ಕಾಲುವೆಗೆ ಎಸೆದು ಕೊಂದಿರುವ ಹೃದಯವಿದ್ರಾವಕ, ಅಮಾನುಷ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಖೇಡಾ ಜಿಲ್ಲೆಯ ಕಪಡ್ವಂಜ್ ತಾಲ್ಲೂಕಿನ ಚೆಲಾವತ್ ಗ್ರಾಮದಲ್ಲಿ ಜುಲೈ 10ರಂದು ಘಟನೆ ನಡೆದಿದ್ದು, ಇದೀಗ ಆರೋಪಿಯ ಪತ್ನಿ ಘಟನೆಯನ್ನು ಬಹಿರಂಗಪಡಿಸಿದ್ದಾರೆ. ಬಳಿಕ, ಆರೋಪಿ ವಿಜಯ್ ಸೋಲಂಕಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜುಲೈ 10ರಂದು ರಾತ್ರಿ ದೀಪೇಶ್ವರಿ ದೇವಾಲಯಕ್ಕೆ ತೆರಳುತ್ತಿದ್ದ ಸಮಯದಲ್ಲಿ ಬಾಲಕಿ ಭೂಮಿಕಾಳನ್ನು ಆರೋಪಿ ಕೊಂದಿದ್ದಾನೆ. ಆರೋಪಿ ವಿಜಯ್ ತನಗೆ ಗಂಡು ಮಗು ಇಲ್ಲವೆಂಬ ಕಾರಣಕ್ಕೆ ಅತೃಪ್ತನಾಗಿದ್ದ. ಆದ್ದರಿಂದಲೇ, ಆಗಾಗ್ಗೆ ತನ್ನ ಮಗಳ ಮೇಲೆ ಸಿಡುಕುಗೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisements

“ಘಟನೆ ನಡೆದ ರಾತ್ರಿ, ಆರೋಪಿ ವಿಜಯ್ ತನ್ನ ಪತ್ನಿ ಅಂಜನಾಬೆನ್ ಮತ್ತು ಮಗಳು ಭೂಮಿಕಾಳನ್ನು ಬೈಕ್‌ನಲ್ಲಿ ದೇವಸ್ತಾನಕ್ಕೆ ಕರೆದೊಯ್ಯುತ್ತಿದ್ದನು. ನರ್ಮದಾ ಕಾಲುವೆಯ ಮೇಲಿನ ವಾಘಾವತ್ ಸೇತುವೆ ಮೇಲೆ ಆರೋಪಿ ಬೈಕ್‌ ನಲ್ಲಿಸಿದ್ದಾನೆ. ತಕ್ಷಣವೇ, ಮಗಳನ್ನು ಕಾಲುವೆಗೆ ಎಸೆದಿದ್ದಾನೆ. ಘಟನೆ ಬಗ್ಗೆ ಯಾರಿಗೂ ಹೇಳದಂತೆ ಪತ್ನಿಗೆ ಬೆದರಿಕೆ ಹಾಕಿದ್ದಾನೆ” ಎಂದು ಪೊಲೀಸರು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮತ್ತೆ ಬಂದ ನಾರಾಯಣ ಮೂರ್ತಿ; 70 ಗಂಟೆ ಆಯ್ತು, ಈಗ 100 ಗಂಟೆ ಕೆಲಸದ ಸರದಿ

ಬಾಲಕಿಯ ಮೃತದೇಹವು ಜುಲೈ 11ರಂದು ಕಾಲುವೆಯಲ್ಲಿ ಪತ್ತೆಯಾಗಿದೆ. ಮೃತದೇಹ ಪತ್ತೆಯಾದಾಗ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿತ್ತು. ಆದರೆ, ಮಗಳನ್ನು ಕಳೆದುಕೊಂಡು ನೊಂದಿದ್ದ ತಾಯಿ ಅಂಜನಾಬೆನ ಅವರು ತನ್ನ ಮಗಳನ್ನು ಪತಿಯೇ ಕೊಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಆಕೆ ನೀಡಿದ ದೂರಿನ ಮೇಲೆ ಹೊಸದಾಗಿ ಪ್ರಕರಣ ದಾಖಲಿಸಿಕೊಂಡ ಅತರ್ಸುಬಾ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆಗೆ ಒಳಪಡಿಸಿದ್ದಾರೆ. “ವಿಚಾರಣೆಯ ಸಮಯದಲ್ಲಿ ಸೋಲಂಕಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ತನಗೆ ಹೆಣ್ಣು ಮಕ್ಕಳು ಬೇಡ, ಗಂಡು ಮಗು ಬೇಕೆಂದು ಆತ ಹೇಳಿಕೊಂಡಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X