ಧರ್ಮಸ್ಥಳ ಪ್ರಕರಣ | ತನಿಖೆಗಾಗಿ SIT ರಚನೆಗೆ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹ

Date:

Advertisements

ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಹಲವಾರು ಅತ್ಯಾಚಾರ, ಕೊಲೆ ಹಾಗೂ ಗೌಪ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಬೇಕು. ಪ್ರಕರಣದ ಪ್ರಮುಖ ಸಾಕ್ಷಿ-ಫಿರ್ಯಾದಿಗೆ ಭದ್ರತೆ ಮತ್ತು ರಕ್ಷಣೆ ಒದಗಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಆಗ್ರಹಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಅನಾಮಧೇಯ ಪ್ರಮುಖ ಸಾಕ್ಷಿಯು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ತನ್ನ ಹೇಳಿಕೆ ದಾಖಲಿಸಿದ್ದಾರೆ. ಆದಾಗ್ಯೂ, ತನಿಖೆ ಸರಿಯಾಗಿ ನಡೆಯುತ್ತಿಲ್ಲ. ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬುದನ್ನು ಖಾಲಿ ಪೇಪರ್ ಮೇಲೆ ಗುರುತು ಮಾಡಿಕೊಡುವಂತೆ ಸಾಕ್ಷಿ ಫಿರ್ಯಾದಿ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಆತನ ಹೇಳಿಕೆಗಳನ್ನು ಸೋರಿಕೆ ಮಾಡಲಾಗುತ್ತಿದೆ. ಇದೆಲ್ಲವನ್ನೂ ಸರ್ಕಾರ ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

Advertisements

“ಆತನ ಹೇಳಿಕೆ ದಾಖಲಿಸಿಕೊಂಡಿರುವ ತನಿಖಾಧಿಕಾರಿಯು ಯಾರಿಗೋ ಕರೆ ಮಾಡಿ, ಅವರು ಸೂಚಿಸಿದ್ದಂತೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂಬ ಗಂಭೀರ ಆರೋಪಗಳಿವೆ. ಆದ್ದರಿಂದ, ತಕ್ಷಣವೇ ತನಿಖಾ ತಂಡವನ್ನು ಬದಲಿಸಬೇಕು. ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ರಚಿಸಬೇಕು. ಸಾಕ್ಷಿ ಫಿರ್ಯಾದುದಾರ ಮತ್ತು ಆತನ ವಕೀಲರಿಗೆ ಬೆದರಿಕೆ ಇದ್ದು, ಇಬ್ಬರೂ ತಕ್ಷಣವೇ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕಾನಾಥ್, ”ಬಿಎನ್ಎಸ್ 183ನೇ ಸೆಕ್ಷನ್ ಅಡಿಯಲ್ಲಿ ಸಾಕ್ಷಿ ಫಿರ್ಯಾದಿ ನೀಡಿದ ಹೇಳಿಕೆ ಸಾಕ್ಷ್ಯವಾಗುತ್ತದೆ. ಈ ಹೇಳಿಕೆಗಳು ಖಾಸಗಿ ವ್ಯಕ್ತಿಗಳಿಗೆ ಸೋರಿಕೆಯಾಗುತ್ತಿದೆ. ಇದನ್ನು ತಪ್ಪಿಸಿ ಎಂದು ವಕೀಲರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಸರಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಬಾಲನ್, ಉಮಾಪತಿ, ಸುಧಾ ಕಟ್ವಾ, ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X