ಮನೆಯಲ್ಲಿ ನಗದು ಪತ್ತೆ ಹಗರಣ: ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂ ಮೊರೆ ಹೋದ ನ್ಯಾಯಮೂರ್ತಿ ಯಶವಂತ್‌ ವರ್ಮಾ

Date:

Advertisements

ಕಳೆದ ಮಾರ್ಚ್‌ನಲ್ಲಿ ಸಂಭವಿಸಿದ ಅಗ್ನಿ ಅನಾಹುತ ಸಂದರ್ಭ ನವದೆಹಲಿಯ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನೋಟಿನ ಕಂತೆಗಳು ಪತ್ತೆಯಾದ ಘಟನೆ ಬಳಿಕ ವಿವಾದದ ಕೇಂದ್ರ ಬಿಂದುವಾಗಿರುವ ನ್ಯಾಯಮೂರ್ತಿ ಯಶವಂತ್‌ ವರ್ಮಾ ವಿಶೇಷ ತನಿಖಾ ತಂಡದ ವರದಿ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ತನಿಖಾ ತಂಡ ನೀಡಿದ್ದ ವರದಿಯನ್ನು ಅಮಾನ್ಯ ಮಾಡುವಂತೆ ಕೋರಿ ನ್ಯಾಯಮೂರ್ತಿ ವರ್ಮಾ ಅರ್ಜಿ ಸಲ್ಲಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಪತ್ತೆಯಾದ ನಗದಿನ ವಿಚಾರದಲ್ಲಿ ನ್ಯಾಯಮೂರ್ತಿ ವರ್ಮಾ ರಹಸ್ಯ ಅಥವಾ ಸಕ್ರಿಯ ನಿಯಂತ್ರಣ ಹೊಂದಿದ್ದಕ್ಕೆ ಪ್ರಬಲವಾದ ಪುರಾವೆ ಇದೆ ಎಂದು ತನಿಖಾ ವರದಿಯಲ್ಲಿ ಹೇಳಲಾಗಿತ್ತು.

ಇದನ್ನು ಓದಿದ್ದೀರಾ? ಹಣ ಪತ್ತೆ ಹಗರಣ: ನ್ಯಾಯಮೂರ್ತಿ ವರ್ಮಾ ದೈನಂದಿನ ವಿಚಾರಣೆ ಮಾಡುವಂತಿಲ್ಲ, ಆದೇಶ- ತೀರ್ಪು ನೀಡುವಂತಿಲ್ಲ

Advertisements

ನ್ಯಾಯಮೂರ್ತಿ ವರ್ಮಾ ವಿರುದ್ಧದ ವಾಗ್ದಂಡನೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ಮಾಡಿದ್ದ ಶಿಫಾರಸ್ಸು ರದ್ದು ಪಡಿಸುವಂತೆಯೂ ರಿಟ್ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಂವಿಧಾನಾತ್ಮಕ ಹುದ್ದೆಯ ಹಾಗೂ ವೈಕ್ತಿಯ ಹಕ್ಕುಗಳಿಗೆ ವಿರುದ್ಧವಾಗಿ ತೀರಾ ಒರಟಾಗಿ ಸಿದ್ಧಪಡಿಸಿದ ಆಧಾರ ರಹಿತ ವರದಿ ಇದಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ವಿರುದ್ಧ ವಾಗ್ದಂಡನೆ ಪ್ರಕ್ರಿಯೆಯನ್ನು ಸರ್ಕಾರ ಮುಂದಿನ ಮುಂಗಾರು ಅಧಿವೇಶನದಲ್ಲಿ ಆರಂಭಿಸಲಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಈ ಅರ್ಜಿ ಸಲ್ಲಿಕೆಯಾಗಿದೆ.

ಸುಪ್ರೀಂಕೋರ್ಟ್ ನೇಮಕ ಮಾಡಿದ್ದ ಮೂವರು ನ್ಯಾಯಮೂರ್ತಿಗಳ ತಂಡ ಸಂಪೂರ್ಣ ಹಾಗೂ ನ್ಯಾಯಸಮ್ಮತ ವಿಚಾರಣೆ ನಡೆಸದೇ ಪ್ರತಿಕೂಲ ವರದಿ ನೀಡಿದೆ ಎನ್ನುವುದು ನ್ಯಾಯಮೂರ್ತಿ ವರ್ಮಾ ಅವರ ವಾದ ಎಂದು ಘಟನಾವಳಿಗಳ ಬಗ್ಗೆ ಮಾಹಿತಿ ಇರುವ ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X