ಶಿವಮೊಗ್ಗ | ದೇಸಿದಿನ ಸಾಂಸ್ಕೃತಿಕ ಸಂಭ್ರಮ

Date:

Advertisements

ಶಿವಮೊಗ್ಗ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಳಿ ಹೆಚ್ಚಿರುವ ಇಂದಿನ ದಿನಮಾನದಲ್ಲಿ ದೇಸಿ ಸಂಸ್ಕೃತಿ‌ಯನ್ನು ಅಳವಡಿಸಿಕೊಳ್ಳುವ ತುರ್ತಿದೆ ಎಂದು ಕುವೆಂಪು ವಿಶ್ವವಿದ್ಯಾಲಯ ಪ್ರಭಾರ ಕುಲಪತಿ ಪ್ರೊ. ಜಗನ್ನಾಥ ಕೆ. ಡಾಂಗೆ ಅಭಿಪ್ರಾಯ‌ಪಟ್ಟರು.

ಕನ್ನಡ ಭಾರತಿ ಶುಕ್ರವಾರ ಏರ್ಪಡಿಸಿದ್ದ ‘ದೇಸಿದಿನ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಬುದ್ಧ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ನೆಲದ ಸಂಸ್ಕೃತಿ‌ಯನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ‌ಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತಾಡಿದ ಕುಲಸಚಿವ ಎ.ಎಲ್. ಮಂಜುನಾಥ್,  ಹಳ್ಳಿಯ ಸೊಗಡಿನಲ್ಲಿ ಬದುಕಿನ ಸವಿ ಇದೆ. ಹಳ್ಳಿಯ ಬದುಕನ್ನು ಗೌರವಿಸಿ, ಪ್ರೀತಿಯಿಂದ ಅಪ್ಪಿಕೊಳ್ಳಬೇಕಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

Advertisements

ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಕಾರ್ಯಕ್ರಮ‌ದ ಅಧ್ಯಕ್ಷತೆ ವಹಿಸಿ,  ಹಗಲು ರಾತ್ರಿ ಇರುವಂತೆ ಕಷ್ಟಸುಖಗಳು ಸಹ ಬದುಕಿನ‌ಲ್ಲಿ ನಿರಂತರವಾಗಿ ಇರುತ್ತವೆ.  ಅವುಗಳನ್ನು ಎದುರಿಸುವ ಸಾಮರ್ಥ್ಯವನ್ನು ಸಾಹಿತ್ಯದ ಓದು ನೀಡಬಲ್ಲುದು. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅರ್ಥೈಸಿಕೊಂಡು ಅಳವಡಿಸಿಕೊಳ್ಳಲು ಇಂಥ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ತಿಳಿಸಿದರು.

ಹಿರಿಯ ಪ್ರಾಧ್ಯಾಪಕ ಪ್ರೊ. ಪ್ರಶಾಂತ ನಾಯಕ ಉಪಸ್ಥಿತರಿದ್ದರು. ವಿದ್ಯಾರ್ಥಿ‌ನಿ ರಿಯಾಷಾ  ಪ್ರಾರ್ಥನೆ ಮಾಡಿದರು. ತನುಶ್ರೀ ಸ್ವಾಗತಿಸಿದರು. ನಮಿತ ನಿರೂಪಿಸಿದರು. ವೇದಿಕೆ ಕಾರ್ಯಕ್ರಮ‌ದ ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X