ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಗಡುವು; ಆಯುಕ್ತ ಮಹೇಶ್ವರ್ ರಾವ್ ಹೇಳಿದ್ದೇನು?

Date:

Advertisements

ಈಜೀಪುರ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 2026ರ ವೇಳೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬನ್ನೇರುಘಟ್ಟ ರಸ್ತೆ ಸಕಲವಾರ ಗ್ರಾಮದ ಸೆಗ್ಮೆಂಟ್ ಕಾಸ್ಟಿಂಗ್ ಯಾರ್ಡ್ ಗೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಮೇಲ್ಸೇತುವೆಗೆ ಕಾಸ್ಟಿಂಗ್ ಮಾಡುವ ಕಾರ್ಯವನ್ನು ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.

“ಈಜೀಪುರ ಮುಖ್ಯ ರಸ್ತೆಯಲ್ಲಿ 2.38 ಕಿ.ಮೀ ಉದ್ದದ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತಿದೆ. ಮೇಲ್ಸೇತುವೆಗೆ ಒಟ್ಟು 762 ಸೆಗ್ಮೆಂಟ್ ಕಾಸ್ಟಿಂಗ್‌ಗಳು ಬರಲಿದ್ದು, ಈಗಾಗಲೇ 437 ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸಲಾಗಿದೆ. ಇನ್ನು 325 ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸಬೇಕಿದೆ. ಈ ಸಂಬಂಧ ಪ್ರತಿ ತಿಂಗಳು 45 ಸೆಗ್ಮೆಂಟ್ ಗಳನ್ನು ಸಿದ್ದಪಡಿಸಿ ಅಳವಡಿಸಬೇಕು” ಎಂದು ಸೂಚಸಿದರು.

Advertisements
WhatsApp Image 2025 07 18 at 1.22.53 PM

“ಸೆಗ್ಮೆಂಟ್ ಕಾಸ್ಟಿಂಗ್ ಅಳವಡಿಸುವ ಕಾಮಗಾರಿಗೆ ವೇಗ ನೀಡಿ ಕಾಸ್ಟಿಂಗ್ ಅಳವಡಿಸುವ ಪ್ರಕ್ರಿಯೆಯನ್ನು ವರ್ಷಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಇನ್ನುಳಿದ ಕಾಮಗಾರಿಯನ್ನು ಮಾರ್ಚ್ 2026ರ ಒಳಗಾಗಿ ಪೂರ್ಣಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಸೆಂಟ್ ಜಾನ್ಸ್ ಆಸ್ಪತ್ರೆ ಹಾಗೂ ಸೆಂಟ್ ಜಾನ್ಸ್ ಹಾಸ್ಟೆಲ್ ಬಳಿಯ 2 ಕಡೆ ಭೂಸ್ವಾಧೀನಪಡಿಸಿಕೊಳ್ಳಬೇಕಾಕಿದ್ದು, ಈ ಸಂಬಂಧ ಈಗಾಗಲೇ ಸಂಬಧಪಟ್ಟವರ ಜೊತೆ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಶೀಘ್ರ ರ‍್ಯಾಂಪ್ ಕಾಮಗಾರಿಯನ್ನು ಪ್ರಾರಂಭಿಸಿ ಪೂರ್ಣಗೊಳಿಸಿ” ಎಂದು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯ ಅಭಿಯಂತರ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ, “ಈಜೀಪುರ ಮೇಲ್ಸೇತುವೆ ಕಾಮಗಾರಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ರೂಪುರೇಶೆಗಳನ್ನು ಸಿದ್ದಪಡಿಸಿಕೊಂಡು ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ. ಮೇಲ್ಸೇತುವೆಯಲ್ಲಿ ಕಾಸ್ಟಿಂಗ್ ಸೆಗ್ಮೆಂಟ್ ಎರೆಕ್ಷನ್ ಅನ್ನು ರಾತ್ರಿ 11 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಮಾತ್ರ ಮಾಡಲಾಗುತ್ತಿದ್ದು, ಇರುವ ಸಮಯದಲ್ಲಿ ತ್ವರಿತವಾಗಿ ಕೆಲಸ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ನಡುವೆ ಕೆಲಸ ಮಾಡಲಾಗುತ್ತಿದೆ. ಇನ್ನು ಪಾದಚಾರಿ ಮಾರ್ಗ ಕಾಮಗಾರಿಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಮೇಲ್ಸೇತುವೆ ಕಾಮಗಾರಿ ಆಗಿರುವ ಕೆಳಭಾಗದಲ್ಲಿ ಡಾಂಬರೀಕರಣ ಮಾಡಲಾಗಿದ್ದು, ಇತರೆಡೆ ಪ್ರಗತಿಯಲ್ಲಿದೆ‌. ಶೋಲ್ಡರ್ ಡ್ರೈನ್ ಹಾಗೂ ಮೀಡಿಯನ್ ಕೆಲಸ ಪ್ರಗತಿಯಲ್ಲಿದೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರು | ಮೂಡಬಿದ್ರೆ ಕಾಲೇಜಿನ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕರಿಬ್ಬರು ಸೇರಿ ಮೂವರ ಬಂಧನ

ಈ ವೇಳೆ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X