ಬೀದರ್‌ | ವಿದ್ಯುತ್‌ ಗುತ್ತಿಗೆದಾರರ ಬೇಡಿಕೆಗೆ ಸ್ಪಂದಿಸುವಂತೆ ಆಗ್ರಹ

Date:

Advertisements

ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕಚೇರಿಯಲ್ಲಿ ಗುತ್ತಿಗೆದಾರರ ಸಂಘದ ಕಾರ್ಯಕರ್ತರು ಎಇಇ ಮೂಲಕ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

“ವಿದ್ಯುತ್ ಕಂಪನಿಗಳ ಹಿರಿಯ ಅಧಿಕಾರಿಗಳು ವಿದ್ಯುತ್ ಕಾಮಗಾರಿಗಳನ್ನು ದೊಡ್ಡ-ದೊಡ್ಡ ಏಜೆನ್ಸಿಗಳಿಗೆ ನೀಡುವ ಮೂಲಕ ಇಲ್ಲಿನ ಸ್ಥಳೀಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ದೂರಿದರು.

Advertisements

“ಗುತ್ತಿಗೆದಾರರಿಗೆ ₹5 ಲಕ್ಷದವರೆಗೆ ತುಂಡು ಗುತ್ತಿಗೆ ನೀಡಬೇಕು. ಪೂರ್ಣಗೊಂಡ ಎಲ್ಲ ಕಾಮಗಾರಿಗಳ ಬಿಲ್ ಕೂಡಲೇ ಪಾವತಿಸಬೇಕು. ಮೀಟರ್ ಔಟ್‌ಲೆಟ್‌ಗಳಲ್ಲಿ ಸರಿಯಾದ ಸಮಯಕ್ಕೆ ವಿದ್ಯುತ್ ಮಾಪಕಗಳು ದೊರೆಯದ ಕಾರಣ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರಿಗೆ ತುಂಬಾ ತೊಂದರೆಯಾಗಿದೆ. ಕಾರಣ ವಿದ್ಯುತ್ ಮಾಪಕಗಳನ್ನು ಸರಿಯಾದ ಸಮಯಕ್ಕೆ ವಿತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

ಈ ಸಂದರ್ಭದಲ್ಲಿ ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮುರಳಿ ಪೊದ್ದಾರ್, ಪ್ರಮುಖರಾದ ಶೈಲೇಶ ಚಳಕಾಪೂರೆ, ರಾಹೀಲ್ ಪಾಶಾ, ದತ್ತು ಪಾಟೀಲ್, ರಾಜು ರಾಠೋಡ್, ಸಿದ್ದು, ವಿಲಾಸ ರಾಠೋಡ್, ಸೋಮನಾಥ ಟೋಕರೆ, ಶರಣಕುಮಾರ ಭೋರಾಳೆ, ಪ್ರಕಾಶ್, ವಿಜಯಕುಮಾರ ಕಣಜಿ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X