ಗದಗ | ಮಹಿಳೆಯರ ಸ್ವಾವಲಂಬನೆ ಬದುಕಿಗೆ ಮನರೇಗಾ ಆಸರೆ: ಎಡಿಪಿಸಿ ಕಿರಣ ಕುಮಾರ್

Date:

Advertisements

ಮನರೇಗಾ ಯೋಜನೆಯು ಗ್ರಾಮೀಣ ಮಹಿಳೆಯರ ಜೀವನ ಹಸನಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಯೋಜನೆಯ ಸದ್ಬಳಕೆಯಲ್ಲಿ ಎಲ್ಲರ ಸಹಭಾಗಿತ್ವ, ಸಹಕಾರ ಅತ್ಯಗತ್ಯ ಎಂದು ಎಡಿಪಿಸಿ ಕಿರಣ ಕುಮಾರ್ ಎಸ್.ಎಚ್ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಶಾಂತಗೇರಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. “ಮನರೇಗಾ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಮಹಿಳಾ ಕಾರ್ಮಿಕರ ಸಂಖ್ಯೆಯನ್ನು ವೃದ್ಧಿಸಿ, ಅವರಲ್ಲಿ ಸ್ವಾವಲಂಬಿ ಮನೋಭಾವ ಬೆಳೆಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದರು.

ಮನರೇಗಾ ಯೋಜನೆಯ ತಾಲೂಕು ಪಂಚಾಯತಿ ಐಇಸಿ ಸಂಯೋಜಕ ಮಂಜುನಾಥ ಹಳ್ಳದ ಮಾತನಾಡಿ, “ತಾಲೂಕಿನಲ್ಲಿಯೇ ಶಾಂತಗೇರಿ ಗ್ರಾಮ ಪಂಚಾಯತಿ ಮನರೇಗಾ ಯೋಜನೆಗೆ ಅತೀ ಕಡಿಮೆ ಮಹಿಳಾ ಪಾಲ್ಗೊಳ್ಳುವಿಕೆಯಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಲ್ಲಿ ತೊಡಸಿಕೊಳ್ಳಬೇಕು” ಎಂದು ಸೂಚಿಸಿದರು.

Advertisements

ಸಭೆಯಲ್ಲಿ ತಾಂತ್ರಿಕ ಸಹಾಯಕ ಉಮೇಶ ಜಕ್ಕಲಿ, ಬಿಎಫ್ ಟಿ ಜ್ಯೋತಿ ವಡ್ಡರ, ಎಚ್.ಎಸ್. ಪವಾಡಿಗೌಡ್ರ, ಡಿಇಒ ಪ್ರಕಾಶ ನರೇಗಲ್, ಗ್ರಾಮ ಕಾಯಕ ಮಿತ್ರ ಶಿವಗಂಗಾ ಹುಲ್ಲಣ್ಣವರ, ಪಂಚಾಯತ್ ಸಿಬ್ಬಂದಿಗಳಾದ ಶಾಂತಾ ಬಾಗೂರು, ಮರಿಯಪ್ಪ ಮಾದರ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X