ತುಂಗಾಭದ್ರಾ ಜಲಾಶಯದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ: ಡಿಕೆ ಶಿವಕುಮಾರ್

Date:

Advertisements
  • ಸಚಿವ ಶಿವರಾಜ್‌ ತಂಗಡಗಿ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ
  • ‘ತುಂಗಭದ್ರಾ ಜಲಾಶಯದಲ್ಲಿ 83 ಟಿಎಂಸಿ ನೀರು ಸಂಗ್ರಹವಾಗಿದೆ’

ರೈತರ ಬೇಡಿಕೆ ಹಿನ್ನೆಲೆಯಲ್ಲಿ ತುಂಗಭದ್ರಾ ಅಣೆಕಟ್ಟೆ ಮೂಲಕ ನೀರು ಹರಿಸುವಂತೆ ಜಿಲ್ಲಾ ಸಚಿವರು, ಶಾಸಕರು ಕೇಳುತ್ತಿದ್ದಾರೆ. ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‌ ತಿಳಿಸಿದರು.

ದೆಹಲಿ ಪ್ರವಾಸದಲ್ಲಿರುವ ಡಿಕೆ ಶಿವಕುಮಾರ್‌ ಗುರುವಾರ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿ, “ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಅಣೆಕಟ್ಟೆ ಮೂಲಕ ನೀರು ಹರಿಸಲು ಒತ್ತಡ ಬಂದ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

ತುಂಗಭದ್ರಾ ಜಲಾಶಯದಲ್ಲಿ 105 ಟಿಎಂಸಿ ನೀರು ಶೇಖರಣಾ ಸಾಮರ್ಥ್ಯವಿದ್ದು, ಈಗಾಗಲೇ 83 ಟಿಎಂಸಿ ನೀರು ಸಂಗ್ರಹವಾಗಿದೆ. ರೈತರಿಂದ ಬಹಳ ಬೇಡಿಕೆ ಇರುವ ಕಾರಣ 5,575 ಕ್ಯೂಸೆಕ್ಸ್ ನೀರನ್ನು ಹರಿಸಲು ಅನುಮತಿ ನೀಡಲಾಗಿದೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ಧಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ: ಆರಗ ವಿರುದ್ಧ ಪ್ರಿಯಾಂಕ್‌ ಕಿಡಿ

ಸಚಿವ ಶಿವರಾಜ್‌ ತಂಗಡಗಿ ನೇತೃತ್ವದಲ್ಲಿ ಸಲಹಾ ಸಮಿತಿ

“ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿ, ತುಂಗಭದ್ರಾ ಸಲಹಾ ಸಮಿತಿ ರಚಿಸಲಾಗಿದೆ. ಬರುವ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನಿಸಲಾಗುವುದು” ಎಂದರು.

“ಟಿಎಲ್‌ಬಿಸಿಗೆ ಸುಮಾರು 1300 ರಿಂದ 1500 ಕ್ಯೂಸೆಕ್ಸ್, ಆರ್ ಬಿಎಲ್ ಸಿಯಲ್ಲಿ 1200 ಕ್ಯೂಸೆಕ್ಸ್, ಆರ್ ಎಚ್ ಬಿಎಲ್ ಸಿಗೆ 1375 ಕ್ಯೂಸೆಕ್‌ ನೀರು ನೀಡಬೇಕಾಗಿದೆ. ಇದರ ಜತೆಗೆ ಆಂಧ್ರ ಪ್ರದೇಶದ ಪಾಲಿನ ನೀರನ್ನು ಬಿಡಬೇಕಾಗಿದ್ದು, ಒಟ್ಟು 5575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ ನೀಡಲಾಗಿದೆ. ಈ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X