ಉಡುಪಿ | ಆಸ್ಪತ್ರೆಯ ಪರಿಸರದಲ್ಲಿ ಜ್ವರ ಬಾಧೆಗಳು ಪಸರಿಸುವ ಭೀತಿ ! ಗಿಡ ಗಂಟಿಗಳ ಕಟಾವಿಗೆ ಆಗ್ರಹ

Date:

Advertisements

ಉಡುಪಿ ನಗರದ ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಬಳಿಯಲ್ಲಿರುವ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದ ಸುತ್ತಲು ಗಿಡ ಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಯ ಪರಿಸರವು ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ ಕಾರ್ಖಾನೆಯಾಗಿ ಮಾರ್ಪಟ್ಟಿದ್ದು, ಜಿಲ್ಲಾ ಆರೋಗ್ಯ ಇಲಾಖೆ, ನಗರಾಡಳಿತ ತಕ್ಷಣ ಗಿಡಗಂಟಿಗಳನ್ನು ಕಟಾವುಗೊಳಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿರುವುದರಿಂದ ಉರಗಾದಿ, ವಿಷ ಜಂತುಗಳು ನೆಲೆ ಪಡೆಯಲು ಯೋಗ್ಯ ಸ್ಥಳವಾದಂತಾಗಿದೆ. ಪರಿಸರ ಶುಚಿತ್ವದ ಸಂದೇಶ ಸಾರಬೇಕಾದ ಆಸ್ಪತ್ರೆಯ ಮಡಿಲಿನಲ್ಲಿ ಅಶುಚಿತ್ವದ ವಾತಾವರಣ ಸೃಷ್ಟಿಯಾಗಿರುವುದು ವಿಪರ್ಯಾಸದ ಸಂಗತಿ ಎನಿಸಿಕೊಂಡಿದೆ. ಡೆಂಗ್ಯೂ, ಮಲೇರಿಯ ಜ್ವರ ಬಾಧಿಸುವ‌ ಭೀತಿಯು ಎದುರಾಗಿದೆ. ಪ್ರತಿ ವರ್ಷದ ಮಳೆಗಾಲದಲ್ಲೂ ಆಸ್ಪತ್ರೆಯ ಸುತ್ತಲು ಗಿಡಗಂಟಿಗಳು ಬೆಳೆದು ಸಮಸ್ಯೆ ಉದ್ಭವಿಸುವುದು ಕಂಡುಬರುತ್ತದೆ. ಹಾಗಾಗಿ ನೆಲವನ್ನು ಸಮತಟ್ಟುಗೊಳಿಸಿ ನೆಲಹಾಸು ಅಳವಡಿಸುವುದರಿಂದ, ಸಮಸ್ಯೆಯಿಂದ ಶಾಶ್ವತ ಮುಕ್ತಿ ಪಡೆಯಲು ಸೂಕ್ತ ಪರಿಹಾರವಾಗಿದ್ದು, ಆರೋಗ್ಯ ಇಲಾಖೆ ಗಮನಿಸಬೇಕಾಗಿದೆ ಎಂದು ಸಾಮಾಜಿಕ ಕಾರ್ಯರ್ಕರ್ತರು ಸಲಹೆಯನ್ನು ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X