ತರೀಕೆರೆ | ದಲಿತರ ಭೂಮಿ, ವಸತಿ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

Date:

Advertisements

ದಸಂಸ ( ಅಂಬೇಡ್ಕರ್ ವಾದ ) ತಾಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿ ಆವರಣದಲ್ಲಿ ದಲಿತರ ಭೂಮಿ – ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.

ಫಾರಂ ನಂ. 50, 53, 57 ರಲ್ಲಿ ಅರ್ಜಿ ಸಲ್ಲಿಸಿರುವ ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡದೆ ಶಾಸಕರ ಅಧ್ಯಕ್ಷತೆಯಲ್ಲಿರುವ ಬಗರ್ ಹುಕ್ಕುಂ ಸಮಿತಿಗಳು ನಿರ್ಲಕ್ಷ್ಯದಿಂದ ಸಭೆಗಳು ನಡೆಸದೆ ರಾಶಿಗಟ್ಟಲೆ ಅರ್ಜಿಗಳು ಕೊಳೆಯುತ್ತ ಬಿದ್ದಿವೆ.

ಹಾಗೆಯೇ, ತರೀಕೆರೆ ತಾಲೂಕಿನಲ್ಲಿ ಎಂಸಿ ಹಳ್ಳಿ ಗ್ರಾಮದ ಮಲ್ಲಯ್ಯನಕೆರೆ ಒತ್ತುವರಿ ಸಮಸ್ಯೆ ಬಗೆಹರಿಸದೆ ಕಾಲ ಹರಣ ಮಾಡುತ್ತಿರುವ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕೆಂದು ಮತ್ತು ತರೀಕೆರೆ ತಾಲೂಕು ಕಚೇರಿಯಲ್ಲಿ ಪಿಟಿಸಿಎಲ್ ಕೇಸಿಗೆ ಸಂಬಂಧಿಸಿದ ಭೂ ದಾಖಲಾತಿಗಳು ಅಭಿಲೇೇಕಾಲಯದಲ್ಲಿ ದಾಖಲಾತಿಗಳು ಕಣ್ಮರೆಯಾಗುತ್ತಿದ್ದು ಇದಕ್ಕೆಲ್ಲ ಕಾರಣವಾಗುತ್ತಿರುವ ಸಿಬ್ಬಂದಿಗಳನ್ನು ಅಮಾನತ್ತು ಮಾಡಬೇಕು. ಬಿ. ರಾಮನಹಳ್ಳಿ ಗ್ರಾಮದ ಗ್ರಾಮ ಠಾಣಾ ಒತ್ತುವರಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಅಲ್ಲಿನ ಪರಿಶಿಷ್ಟ ಜಾತಿಯವರಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು ಎಂದು ದಸಂಸ ಮುಖಂಡ ಎಚ್ ಎಸ್ ರಾಜಪ್ಪ ಈದಿನ.ಕಾಮ್ ಜೊತೆ ಮಾಹಿತಿ ವ್ಯಕ್ತಪಡಿಸಿದರು.

Advertisements

ಇದನ್ನೂ ಓದಿದೀರಾ?ಚಿಕ್ಕಮಗಳೂರು l ಸೌಜನ್ಯ ಪರ ಹೋರಾಟ: ಪ್ರತಿಭಟನೆಗೆ ನಿರಾಕರಿಸಿದ ಪೊಲೀಸ್ ಇಲಾಖೆ SDPI ಆರೋಪ

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಎಂ ಜೆ ರಾಮಚಂದ್ರ, ಸಂಘಟನೆಯ ಮುಖಂಡರಾದ ಅಣ್ಣಯ್ಯ, ತಾಲೂಕು ಸಂಘಟನಾ ಸಂಚಾಲಕರಾದ ಶಿವಕುಮಾರ್, ರಂಗೇನಹಳ್ಳಿ ವಿಜಯ್, ಕುಡ್ಲೂರು ಮುನಿಯಾ, ಅಹಿಂದ ಸಂಘಟನೆ ಮುಖಂಡರಾದ ಸುನಿಲ್ ಡಿ ಎನ್, ಹನುಮಂತು, ರಘು ಡಿ ಎನ್, ಇಸ್ಮಾಯಿಲ್ ರಂಗೇನಹಳ್ಳಿ, ಸಿದ್ದೀಕ್,  ವಿ ರಾಮನಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X