ಮಾಜಿ ಸಿಎಂ ಕೇಜ್ರಿವಾಲ್, ಹೇಮಂತ್ ಸೊರೇನ್‌ರನ್ನು ಬಂಧಿಸಿದ್ದ ಅಧಿಕಾರಿ ರಾಜೀನಾಮೆ

Date:

Advertisements

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಬ್ಬರು ಈಗಿನ ಮಾಜಿ ಮುಖ್ಯಮಂತ್ರಿಗಳಾದ (ಬಂಧನವಾದಾಗ ಮುಖ್ಯಮಂತ್ರಿ ಯಾಗಿದ್ದರು) ಅರವಿಂದ ಕೇಜ್ರಿವಾಲ್ ಮತ್ತು ಹೇಮಂತ್ ಸೊರೇನ್‌ರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿ ಕಪಿಲ್ ರಾಜ್ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ.

45 ವರ್ಷದ ಕಪಿಲ್ ರಾಜ್ ಅವರು ಸುಮಾರು 16 ವರ್ಷಗಳ ಕಾಲ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅದರಲ್ಲಿ, ಕಳೆದ 8 ವರ್ಷಗಳಿಂದ ಇಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಇನ್ನೂ 15 ವರ್ಷಗಳ ಕಾಲ ಸೇವೆ ಸಲ್ಲಿಸಲು ಸಮಯವೂ ಇತ್ತು. ಆದರೂ, ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: HMT ಭೂಮಿ ಮಾರಾಟಕ್ಕೆ ಮೋದಿ-ಎಚ್‌ಡಿಕೆ ಸಂಚು: ಸುರ್ಜೇವಾಲಾ ಗಂಭೀರ ಆರೋಪ

Advertisements

ಭಾರತೀಯ ಕಂದಾಯ ಸೇವೆಗೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ಭಾರತೀಯ ರಾಷ್ಟ್ರಪತಿಗಳು ಸ್ವೀಕರಿಸಿದ್ದಾರೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

ದೆಹಲಿ ಮುಖ್ಯಮಂತ್ರಿಯಾಗಿದ್ದ ಅರವಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ್ದ ಇಡಿ ತಂಡದಲ್ಲಿ ಕಪಿಲ್ ರಾಜ್ ಕೂಡ ಇದ್ದರು. ಈ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ವಿಚಾರಣೆ ಒಳಪಡಿಸಿದ್ದ ಸಮಯದಲ್ಲಿ, ಅವರನ್ನು ಪ್ರಶ್ನಿಸಲು ಪ್ರಮುಖ ಪ್ರಶ್ನಾವಳಿಗಳನ್ನು ಕಪಿಲ್ ರಾಜ್ ಸಿದ್ದಪಡಿಸಿದ್ದರು ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X