ಚಾಕೊಲೇಟ್​​​ ಪಾನ್​ಗೆ​​​​​ ಗಾಂಜಾ ಬೆರೆಸಿ ಮಾರಾಟ, ತಂದೆ-ಮಗ ಬಂಧನ

Date:

Advertisements

ಚಾಕೊಲೇಟ್​​​ ಪಾನ್​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ಆರೋಪಿಯ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದು ಬಾಲಪರಾಧಿಗಳ ಕೇಂದ್ರಕ್ಕೆ ಕಳುಹಿಸಲಾಗಿದೆ.

ಆರೋಪಿಯು ದಾವಣಗೆರೆ ನಗರದ ರಾಮ್​ ಅಂಡ್​ ಕೋ ಸರ್ಕಲ್​ಲ್ಲಿ ರಾಜು ಪಾನ್‌ ಶಾಪ್​ ಹೆಸರಿಲ್ಲಿ ಅಂಗಡಿ ನಡೆಸುತ್ತಿದ್ದ. ಈತ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಿಶ್ರಿತ ಚಾಕೋಲೇಟ್​ ಪಾನ್​ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

Advertisements

ತನ್ನ ಅಪ್ರಾಪ್ತ ಮಗನ ಕೈಯಲ್ಲಿ ಗಾಂಜಾ ಮಿಶ್ರಿತ ಪಾನ್​ ಕೊಟ್ಟು ಕಾಲೇಜುಗಳ ಬಳಿ ಮಾರಾಟ ಮಾಡಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾಶಪಡಿಸಿದ ಮಾದಕ ದ್ರವ್ಯದ ಮಾಹಿತಿ

2023ರಿಂದ 2025ರ ಇಲ್ಲಿಯವರೆಗೆ ಒಟ್ಟು ಸುಮಾರು 34,78,424 ರೂ. ಬೆಲೆಬಾಳುವ 57 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಕಳೆದ 03 ವರ್ಷಗಳಲ್ಲಿ 5,50,000 ರೂ. ಮೌಲ್ಯದ 72.64 ಗ್ರಾಂ ಎಂಡಿಎಂಎ ಪೌಡರ್ ಹಾಗೂ 1,21,000 ರೂ. ಬೆಲೆಯ 42 ಗ್ರಾಂ ಅಫೀಮು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಕಳೆದ 03 ವರ್ಷಗಳಲ್ಲಿ ಒಟ್ಟು 41,49,424 ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಕಳೆದ 06 ವರ್ಷಗಳಿಂದ ಇಲ್ಲಿಯವರೆಗೆ ಡ್ರಗ್ಸ್ ಡಿಸ್‌ಪೋಸಲ್ ಕಮಿಟಿಯ ಮೂಲಕ ನ್ಯಾಯಾಲಯದ ಆದೇಶ ಪಡೆದು, 323 ಕೆಜಿ 565 ಗ್ರಾಂ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಎಸ್​​ಪಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X