ಅದಾನಿಗೆ ಧಾರಾವಿ: ಜನರನ್ನು ಬೆದರಿಸಿ ಒಪ್ಪಿಗೆ ಪಡೆಯುತ್ತಿರುವ ಸಮೀಕ್ಷಕರು; ಗಂಭೀರ ಆರೋಪ

Date:

Advertisements

ಏಷ್ಯಾದ ಅತಿದೊಡ್ಡ ಕೊಳಗೇರಿ ಎಂದೇ ಹೆಸರಾಗಿರುವ ಮುಂಬೈನ ಧಾರಾವಿಯಲ್ಲಿ ಪುನರ್‌ ಅಭಿವೃದ್ಧಿ ಯೋಜನೆಗಾಗಿ ಸಮೀಕ್ಷೆಗಳು ನಡೆಯುತ್ತಿವೆ. ಈ ಸಮೀಕ್ಷೆ ನಡೆಸುತ್ತಿರುವ ಸಮೀಕ್ಷಕರು ಧಾರಾವಿಯ ಹಿರಿಯ ನಾಗರಿಕರು ಮತ್ತು ವಿಶೇಷಚೇತನರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ವರ್ಷಾ ಗಾಯಕ್ವಾಡ್ ಗಂಭೀರ ಆರೋಪ ಮಾಡಿದ್ದಾರೆ.

ಧಾರಾವಿ ಕೊಳಗೇರಿಯು ಮುಂಬೈನ ಹೃದಯ ಭಾಗದಲ್ಲಿ, ಬರೋಬ್ಬರಿ 600 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ. ಈ ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಪುನರ್‌ವಸತಿ ಒದಗಿಸುತ್ತೇವೆಂದು ಹೇಳಿಕೊಂಡು ‘ಧಾರಾವಿ ಪುನರ್‌ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ರೂಪಿಸಿದೆ. ಯೋಜನೆಯ ಗುತ್ತಿಗೆಯನ್ನು ಪ್ರಧಾನಿ ಮೋದಿ ಅವರ ಅತ್ಯಾಪ್ತ ಎಂದೇ ಕರೆಯಲಾಗುವ ಗೌತಮ್ ಅದಾನಿ ಅವರ ‘ಅದಾನಿ ಗ್ರೂಪ್‌’ಗೆ ನೀಡಲಾಗಿದೆ. ಈ ಪ್ರದೇಶದಲ್ಲಿ ಸುಮಾರು 1 ಲಕ್ಷ ಮನೆಗಳನ್ನು ಬಹುಮಹಡಿ ಕಟ್ಟಡಗಳಲ್ಲಿ ನಿರ್ಮಿಸುವುದು ಪ್ರಮುಖ ಉದ್ದೇಶವಾಗಿದೆ. ಅಂದರೆ, 600 ಎಕರೆ ಜಾಗದ ಪೈಕಿ, ಒಂದು ಪುಟ್ಟ ಭಾಗದಲ್ಲಿ ಅಲ್ಲಿನ ನಿವಾಸಿಗಳಿಗೆ ಮನೆ ನಿರ್ಮಿಸಿಕೊಟ್ಟು, ಉಳಿದ ಬಹುಪಾಲು ಭೂಮಿಯನ್ನು ಕೈಗಾರಿಕೆಗೆ ಅರ್ಥಾತ್ ಅದಾನಿ ಗ್ರೂಪ್‌ನ ಕೈಗಾರಿಕೆಗಳಿಗೆ ನೀಡುವ ಒಳಸಂಚು ಇದೆ ಎಂದು ಆರೋಪಿಸಲಾಗಿದೆ.

ಅಭಿವೃದ್ಧಿ ಹೆಸರಿನಲ್ಲಿ ತಮ್ಮ ಭೂಮಿಯನ್ನು ಕಸಿದುಕೊಂಡು ಬಂಡವಾಳಿಗರಿಗೆ ನೀಡುವ ಸರ್ಕಾರದ ಹುನ್ನಾರವನ್ನು ಅರಿತಿರುವ ಧಾರಾವಿ ಜನರು ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಸಮೀಕ್ಷೆಯಲ್ಲಿ ಭಾಗಿಯಾಗಲು ನಿರಾಕರಿಸುತ್ತಿದ್ದಾರೆ. ಆದರೆ, ಸಮೀಕ್ಷಕರು ಅಲ್ಲಿನ ಜನರನ್ನು ಬೆದರಿಸಿ, ಯೋಜನೆಗೆ ಒಪ್ಪಿಗೆ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Advertisements

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವರ್ಷಾ ಗಾಯಕ್ವಾಡ್, “ಇದು ಸಮೀಕ್ಷೆಯಲ್ಲ, ರಾಜ್ಯ ಸರ್ಕಾರ ಪ್ರಾಯೋಜಿತ ಶೋಷಣೆ. ಅದಾನಿ ಗ್ರೂಪ್‌ನ ಸಮೀಕ್ಷಕರು ಮನೆಯಲ್ಲಿ ಯುವಕರು ಇಲ್ಲದಿದ್ದಾಗ, ಮನೆಗಳಿಗ ನುಗ್ಗಿ ಹಿರಿಯ ನಾಗರಿಕರನ್ನು ಬೆದರಿಸಿ ಬಲವಂತವಾಗಿ ಒಪ್ಪಿಗೆ ಪಡೆಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಧಾರಾವಿಯ ಬಡವರನ್ನು ಹೆದರಿಸಿ, ಮೂಲೆಗೆ ದೂಡಿ, ಮುಂಬೈಯ ಹೃದಯ ಭಾಗವನ್ನು ಅದಾನಿಗೆ ಕೊಡಲು ಹುನ್ನಾರ ನಡೆದಿದೆ. ಈ ಸಮೀಕ್ಷೆಯನ್ನು ತಕ್ಷಣವೇ ನಿಲ್ಲಿಸಬೇಕು. ಧಾರಾವಿ ಎಂದಿಗೂ ತಲೆಬಾಗುವುದಿಲ್ಲ. ನಾವು ನಮ್ಮ ಹಿರಿಯರಿಗೆ ಬೆಂಬಲವಾಗಿ ನಿಲ್ಲುತ್ತೇವೆ” ಎಂದು ವರ್ಷಾ ಗಾಯಕ್ವಾಡ್ ಹೇಳಿದ್ದಾರೆ.

ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅಧಿಕಾರಿಯೊಬ್ಬ ವೃದ್ಧೆಯ ಕೈ ಹಿಡಿದು ಸಹಿ ಹಾಕುವಂತೆ ಒತ್ತಾಯಿಸುತ್ತಿರುವುದು ಮತ್ತು ಸಮೀಕ್ಷಕ ವೃದ್ಧೆಯ ಹೆಬ್ಬೆರಳನ್ನು ಹಿಡಿದು ಬಲವಂತವಾಗಿ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯುತ್ತಿರುವುದು ಕಂಡು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X