ಶಿವಮೊಗ್ಗ | ಅಡಿಕೆ ಕೊಯ್ಲು ಉಪಕರಣಗಳ ಸಹಾಯಧನ ಹೆಚ್ಚಿಸಿ ಕೇಂದ್ರದ ಆದೇಶ : ಸಂಸದ ಬಿ ವೈ ರಾಘವೇಂದ್ರ

Date:

Advertisements

ಶಿವಮೊಗ್ಗ ಜಿಲ್ಲೆಯ, ಅಡಿಕೆ ಬೆಳೆಗಾರರನ್ನು ಬೆಂಬಲಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅಡಿಕೆಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಕೇಂದ್ರ ಸರಕಾರ ಹೆಚ್ಚಿಸಿಸುವ ಮೂಲಕ ಆತ್ಯಾಧುನಿಕ ಕೃಷಿ ಉಪಕರಣಗಳನ್ನು ಕೈಗೆಟುಕುವಂತೆ ಮಾಡಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘವು ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದ ಕೇಂದ್ರ ಸರ್ಕಾರದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ರೈತರನ್ನು ಬೆಂಬಲಿಸಲು ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನವನ್ನು ಹೆಚ್ಚಿಸುವಂತೆ ಮನವಿಯನ್ನು ಮಾಡಲಾಗಿತ್ತು. ಪತ್ರ ಬರೆದು ಒತ್ತಾಯಿಸಲಾಗಿತ್ತು.

ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ ಅಡಿ ಟೆಲಿಸ್ಕೊಪಿಕ್ ಟ್ರಿ-ಪ್ರೂನರ್‌ಗೆ ಸಹಾಯಧನದ ಮೊತ್ತವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಅತೀ ಸಣ್ಣ ರೈತರು ಹಾಗೂ ಮಹಿಳೆಯರಿಗೆ ನೀಡಲಾಗುತ್ತಿದ್ದ ಶೇ.೫೦ ರ ಸಹಾಯಧನ ಗರಿಷ್ಠ ಮೊತ್ತ ರೂ.೫ ಸಾವಿರದಿಂದ ರೂ.೪೦ ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಂತೆಯೇ ಸಾಮಾನ್ಯ ವರ್ಗದ ಕೃಷಿಕರಿಗೆ ನೀಡಲಾಗುತ್ತಿದ್ದ ಶೇ.೪೦ರ ಸಹಾಯಧನದಂತೆ ಗರಿಷ್ಠ ಮೊತ್ತ ರೂ. ೪ ಸಾವಿರದಿಂದ ರೂ.೩೨ ಸಾವಿರಕ್ಕೆ ಹೆಚ್ಚಿಸಿ ಪರಿಷ್ಕರಿಸಿದ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಟೆಲಿಸ್ಕೊಪಿಕ್ ಟ್ರಿ-ಪ್ರೂನರ್ ಉಪಕರಣವು ತುಕ್ಕು ರಹಿತ, ಹಗುರವಿರುವುದರಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ಕೊಂಡೊಯ್ಯಬಹುದಾಗಿದೆ.

ಅತೀ ಎತ್ತರಕ್ಕೆ (೨೦ ಅಡಿಯಿಂದ ೮೦ ಅಡಿ) ಔಷಧಿ ಸಿಂಪರಣೆ ಮಾಡುವಾಗ ಕೂಡ ಸ್ಥಿರವಾಗಿರುವುದರಿಂದ ಈ ಉಪಕರಣಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X