ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಗೂ ಮುನ್ನ ಕಾಮಗಾರಿಯ ನೈಜತೆ ಪರಿಶೀಲನೆ : ಡಿಸಿಎಂ ಶಿವಕುಮಾರ್

Date:

Advertisements

2019-2020 ರಿಂದ 2022-2023ನೇ ಸಾಲಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮೋದನೆಗೊಂಡಿರುವ ಕಾಮಗಾರಿಗಳು, ಈಗ ನಡೆಯುತ್ತಿರುವ ಕಾಮಗಾರಿಗಳು, ಮುಗಿದಿರುವ ಕಾಮಗಾರಿಗಳು ಸೇರಿದಂತೆ ಪ್ರತಿಯೊಂದು ಕಾಮಗಾರಿಗಳ ನೈಜತೆ ಪರಿಶೀಲನೆಗಾಗಿ ಅಗತ್ಯ ಮಾಹಿತಿ ನೀಡುವಂತೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

“ಕಾಮಗಾರಿಗಳ ಬಾಕಿ ಬಿಲ್ ಅನ್ನು ಗುತ್ತಿಗೆದಾರರಿಗೆ ಪಾವತಿಸಬೇಕಿದೆ. ಹಾಗಾಗಿ, ಕಾಮಗಾರಿಗಳ ನೈಜ್ಯತೆ ಪರಿಶೀಲನೆ ಮಾಡಬೇಕಿದೆ. ಪಾಲಿಕೆ ವತಿಯಿಂದ ನಾನಾ ಅನುದಾನದಡಿ ರಸ್ತೆ ಅಭಿವೃದ್ಧಿ, ರಾಜಕಾಲುವೆಗಳು, ಕೆರೆಗಳು, ಕಟ್ಟಡಗಳು ಸೇರಿದಂತೆ ವಾರ್ಡ್‌ ಮಟ್ಟದ ಕಾಮಗಾರಿಗಳ ಬಾಕಿ ಬಿಲ್‌ ಅನ್ನು ಪಾವತಿ ಮಾಡಬೇಕಿದೆ. ಹಾಲಿ ಕಾಮಗಾರಿಯ ವಸ್ತು ಸ್ಥಿತಿಯ ಛಾಯಾಚಿತ್ರ ಸೇರಿದಂತೆ ಕಾಮಗಾರಿಯ ಸಂಪೂರ್ಣ ವಿವರ ನೀಡಬೇಕು” ಎಂದು ಹೇಳಿದ್ದಾರೆ.

“ಈ ಕಾಮಗಾರಿ ನಡೆಸಲು ಅನುಮತಿ ನೀಡಿದವರು ಯಾರು? ಸ್ಥಳ ಪರಿಶೀಲನೆ ನಡೆಸಿ, ಅದರ ಅವಶ್ಯಕತೆ ಕುರಿತು ತಾಂತ್ರಿಕ ವರದಿ ನೀಡಿದ ದಿನಾಂಕ, ವರದಿ ತಯಾರಿಸಿದ ಎಂಜಿನಿಯರ್‌ ಹೆಸರು, ಹುದ್ದೆ, ಕಾಮಗಾರಿಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ ಯೋಜನಾ ಸಮಾಲೋಚಕ ಸಂಸ್ಥೆಯ ಹೆಸರು, ಟೆಂಡರ್‌ ಆಹ್ವಾನಿಸಿದ ದಿನಾಂಕ ಸೇರಿದಂತೆ ಸಂಪೂರ್ಣ ವರದಿಯನ್ನು ನೀಡುವಂತೆ” ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ನುಗ್ಗಿ ದರೋಡೆ ಮಾಡಿದ ದುಷ್ಕರ್ಮಿಗಳು

”ಕಾಮಗಾರಿಗಳ ಬಿಲ್‌ ಪಾವತಿ ಸಂದರ್ಭದಲ್ಲಿ ಕಾಮಗಾರಿಗಳಿಗೆ ಬಳಸಿದ ಸಾಮಗ್ರಿಗಳ ಗುಣಮಟ್ಟ, ಸ್ಥಳ ಪರಿಶೀಲನೆ ನಡೆಸಿ ನ್ಯೂನತೆಗಳನ್ನು ನಮೂದಿಸಿರುವುದು, ಅನುಪಾಲನಾ ವರದಿ, ಕಾಮಗಾರಿಯ ಗುಣಮಟ್ಟದ ಕುರಿತು ದೃಢೀಕರಿಸಿದ ಅಧಿಕಾರಿಗಳ ವಿವರ, ಪ್ರಯೋಗಾಲಯಗಳ ಪರೀಕ್ಷಾ ವರದಿ, ಬಿಲ್‌ ಪಾವತಿಯ ಮಾಹಿತಿಯನ್ನು ಒದಗಿಸಬೇಕು” ಎಂದು ಸೂಚನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X