ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸಂಚಾರ ಮತ್ತಷ್ಟು ದುಬಾರಿ

Date:

Advertisements
  • ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
  • ಬಿಡದಿ, ರಾಮನಗರ ಸವಾರರು ಸರ್ವಿಸ್ ರಸ್ತೆ ಬಳಸಿ ಎಂದ ಪ್ರಾಧಿಕಾರ

ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಸಂಗ್ರಹ ಆರಂಭವಾಗಿ 17 ದಿನಗಳಷ್ಟೇ ಕಳಿದಿವೆ. ಇದೀಗ, ಮತ್ತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಹೆಚ್ಚಳ ಮಾಡಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಳೆದ ಒಂದು ತಿಂಗಳಿನಿಂದ ಸದಾ ಸುದ್ದಿಯಲ್ಲಿದೆ. ಈ ಹಿಂದೆ, ಈ ಮಾರ್ಗದಲ್ಲಿ ಸರ್ವಿಸ್ ರಸ್ತೆಗಳ ಸೌಲಭ್ಯ ನೀಡದೆ ದುಬಾರಿ ಟೋಲ್ ದರ ಸಂಗ್ರಹಿಸುತ್ತಿದ್ದ ಕಾರಣಕ್ಕೆ ಜನರು ಪ್ರತಿಭಟಿಸಿದ್ದರು. ಈಗ ಮತ್ತೆ ದರ ಹೆಚ್ಚಳ ಮಾಡಿರುವುದು ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಎಕ್ಸ್‌ಪ್ರೆಸ್‌ವೇ ಉದ್ಘಾಟನೆಯಾದ ಬಳಿಕ, ಮಾ.14ರಿಂದ ಟೋಲ್ ಸಂಗ್ರಹ ಪ್ರಾರಂಭಿಸಲಾಗಿತ್ತು. ಇದೀಗ, ಕೇವಲ 17 ದಿನಕ್ಕೆ ಮತ್ತೆ ಟೋಲ್ ದರ ಏರಿಕೆ ಮಾಡಲಾಗಿದೆ. ಏ.1ರಿಂದ ಪರಿಷ್ಕ್ರತ ದರ ಜಾರಿಯಾಗಲಿದ್ದು, ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಶೇ.22ರಷ್ಟು ಟೋಲ್ ದರ ಹೆಚ್ಚಳ ಮಾಡಲಾಗಿದೆ.

Advertisements
ಈ ಸುದ್ದಿ ಓದಿದ್ದೀರಾ? ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಅತ್ಯಾಚಾರ; ಬಂಧನ

ಬಿಡದಿ, ರಾಮನಗರ ವಾಹನ ಸವಾರರು ಎಕ್ಸ್‌ಪ್ರೆಸ್‌ವೇ ಬಳಸಬಾರದು. ಸರ್ವಿಸ್ ರಸ್ತೆಯನ್ನು ಮಾತ್ರವೇ ಬಳಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ರಸ್ತೆ ಪ್ರಾಧಿಕಾರ ಮನವಿ ಮಾಡಿದೆ. ಟೋಲ್‌ ದರ ಏರಿಸಿ, ಸರ್ವೀಸ್‌ ರಸ್ತೆ ಬಳಸಿ ಎನ್ನುತ್ತಿರುವ ಪ್ರಾಧಿಕಾರದ ನಿರ್ಧಾರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರಿಷ್ಕೃತ ದರ

  • ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ ₹165 (30ರೂ ಹೆಚ್ಚಳ). ದ್ವಿಮುಖ ಸಂಚಾರ–₹250 (₹45 ಹೆಚ್ಚಳ).
  • ಲಘು ವಾಹನಗಳು/ಮಿನಿಬಸ್: ₹270 (₹50 ಹೆಚ್ಚಳ) ದ್ವಿಮುಖ ಸಂಚಾರ-₹405 (₹75 ಹೆಚ್ಚಳ)
  • ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ – ₹565 (₹165 ಹೆಚ್ಚಳ), ದ್ವಿಮುಖ ಸಂಚಾರ–₹850 (₹160 ಹೆಚ್ಚಳ)
  • ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ ₹615 (₹115 ಹೆಚ್ಚಳ), ದ್ವಿ ಮುಖಸಂಚಾರ–₹925 (₹225 ಹೆಚ್ಚಳ)
  • ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: ₹885 (₹165 ಹೆಚ್ಚಳ) ದ್ವಿಮುಖ ಸಂಚಾರ–₹1,330 ಹೆಚ್ಚಳ (₹250 ಹೆಚ್ಚಳ)
  • 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: ₹1,080 (₹200 ಹೆಚ್ಚಳ) ದ್ವಿಮುಖ ಸಂಚಾರ–₹1,620 (₹305 ಹೆಚ್ಚಳ)

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X