ಉತ್ತರ ಪ್ರದೇಶ | ಸಿಆರ್‌ಪಿಎಫ್ ಯೋಧನಿಗೆ ಕಾಲಿನಿಂದ ಒದ್ದು ಥಳಿಸಿದ ಕಾವಡ್‌ ಯಾತ್ರಿಗಳು

Date:

Advertisements

ಕಾವಡ್‌ ಯಾತ್ರಿಗಳ ಗುಂಪೊಂದು ಸಿಆರ್‌ಪಿಎಫ್ ಯೋಧನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ನಡೆದಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು, ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆ ಫ್ಲಾಟ್‌ಫಾಮ್‌ಗೆ ಬಂದ ಕೆಲವು ಕಾವಡ್‌ ಯಾತ್ರಿಗಳು ಟಿಕೆಟ್ ಖರೀದಿ ವಿಚಾರವಾಗಿ ಯೋಧನೊಂದಿಗೆ ವಾಗ್ವಾದ ನಡೆಸಿದ್ದಾರೆ. ಬಳಿಕ ಅವರನ್ನು ನೆಲಕ್ಕೆ ಬೀಳಿಸಿ, ಕಾಲಿನಿಂದ ಒದ್ದು ಮನಬಂದಂತೆ ಥಳಿಸಿದ್ದಾರೆ. ಘಟನೆ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

Advertisements

ಕೇಸರಿ ಬಣ್ಣದ ವಸ್ತ್ರ ಧರಿಸಿದ ಸುಮಾರು ಏಳೆಂಟು ಮಂದಿ ಕಾವಡ್‌ ಯಾತ್ರಿಗಳು ಯೋಧನನ್ನು ಸುತ್ತುವರೆದಿದ್ದು, ಅವರನ್ನು ಹಿಡಿದು ಎಳೆಯುತ್ತಿರುವುದು, ಕಾಲಿನಿಂದ ಒದೆಯುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಪ್ರಕರಣ ಸಂಬಂಧ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಪೊಲೀಸ್ ಪಡೆಯ ಇನ್ಸ್‌ಪೆಕ್ಟರ್ ಚಮನ್ ಸಿಂಗ್ ತೋಮರ್ ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ 9.30ರ ಸುಮಾರಿಗೆ, ಸಿಆರ್‌ಪಿಎಫ್ ಯೋಧರೊಬ್ಬರು ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಆಗ ಅಲ್ಲಿಗೆ ಬಂದ ಕಾವಡ್‌ ಯಾತ್ರಿಗಳು ಅವರೊಂದಿಗೆ ವಾಗ್ವಾದ ನಡೆಸಿದ್ದಾರೆ. ಸದ್ಯ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಾವಡ ಯಾತ್ರಿಗಳ ಉಗ್ರವಾದಿಗಳ ಕೃತ್ಯಕ್ಕೆ ಸರಕಾರವೇ ಹೊಣೆ ಆದಷ್ಟು ಬೇಗ ಬ್ರಿಕ್ ಹಾಕಬೇಕು ಇದೇ ಕೃತ್ಯ ಮುಸ್ಲಿಂ ಸಮುದಾಯ ಮಾಡಿದ್ದರೆ ಈ ಗೋದಿ ಮಿಡಿಯಾಗಳು ಬಾಯ್ ಬಾಯ್ ಬಡ್ಕೊಳ್ತಾಯಿದ್ದು ಈಗ ನಿಮ್ಮ ಬಾಯಿ ಸತ್ತು ಹೋಗಿವೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X