ಮಾವನ ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಮಹಿಳೆ

Date:

Advertisements

ಮಹಿಳೆಯೋರ್ವರು ತನ್ನ 60 ವರ್ಷದ ಮಾವನನ್ನು ಕೊಂದು ಅರಿಶಿನ ಹಚ್ಚಿ ಗಾಯಗಳನ್ನು ಮುಚ್ಚಿಡಲು ಯತ್ನಿಸಿದ ಘಟನೆ ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೋಹರ್ ನಿರ್ಮಲ್ಕರ್ ಎಂದು ಗುರುತಿಸಲಾಗಿದೆ.

ಆರೋಪಿ ಮಹಿಳೆ ಗೀತಾ ನಿರ್ಮಲ್ಕರ್ ತನ್ನ ಸ್ನೇಹಿತ ಲೇಖ್ರಾಮ್ ನಿಶಾದ್ ಸಹಾಯದಿಂದ ಈ ಕೊಲೆ ಮಾಡಿದ್ದಾಳೆ ಎಂದು ಹೇಳಲಾಗಿದೆ. ತನ್ನ ಮಾವ ನಿದ್ದೆ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನೀಡಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆಯಲ್ಲಿ ಕುಡಿದ ಅಮಲಿನಲ್ಲಿ ಗಲಾಟೆ : ಕೊಲೆಯಲ್ಲಿ ಅಂತ್ಯ

Advertisements

ಮನೋಹರ್ ಕುಡಿದು ಸೈಕಲ್‌ನಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಗೀತಾ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ತಿಳಿಸಿದ್ದಾಳೆ. ಆದರೆ ಅಂತ್ಯಕ್ರಿಯೆ ಸಿದ್ಧತೆ ನಡೆಸುವಾಗ ಗ್ರಾಮಸ್ಥರು ದೇಹದ ಮೇಲೆ ಹಲವು ಗಾಯದ ಗುರುತುಗಳನ್ನು ನೋಡಿ ದೋಂಡಿ ಲೋಹರಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯುತ್ ಆಘಾತದಿಂದ ಸಾವು ಸಂಭವಿಸಿದೆ ಎಂದು ದೃಢಪಟ್ಟಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್, “ಕೊಲೆ ನಡೆದಾಗ ಮನೋಹರ್ ಕುಡಿದು ನಿದ್ರಿಸುತ್ತಿದ್ದರು. ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದಾಗ ಗ್ರಾಮಸ್ಥರು ದೇಹದ ಮೇಲೆ ಗಾಯಗಳನ್ನು ನೋಡಿ ಕೊಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮರಣೋತ್ತರ ಪರೀಕ್ಷೆ ವೇಳೆ ಕೊಲೆ ನಡೆದಿರುವುದು ದೃಢಪಟ್ಟಿದೆ” ಎಂದು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಕುಟುಂಬ ಮತ್ತು ಗ್ರಾಮಸ್ಥರನ್ನು ಪ್ರಶ್ನಿಸಿದ್ದು ಮನೋಹರ್ ಮತ್ತು ಅವರ ಸೊಸೆಯ ನಡುವೆ ಆಗಾಗ್ಗೆ ಜಗಳಗವಾಗುತ್ತಿತ್ತು ಎಂದು ತಿಳಿದುಬಂದಿದೆ. ಇನ್ನು ಸೊಸೆ ತನಗೆ ಮಾವ ಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಿದ್ದಾಳೆ.

“ಆರೋಪಿಗಳು ಮನೋಹರ್ ಮಲಗಿದ್ದಾಗ ದೇಹದ ವಿವಿಧ ಭಾಗಗಳಿಗೆ ವಿದ್ಯುತ್ ಶಾಕ್ ನೀಡಿ ಕೊಂದಿದ್ದಾರೆ. ಬಳಿಕ ಗಾಯಗಳನ್ನು ಮರೆಮಾಡಲು ಅರಿಶಿನ ಮತ್ತು ರೋಸ್ ವಾಟರ್ ಹಚ್ಚಿದ್ದಾರೆ. ಕುಟುಂಬಸ್ಥರು ಮತ್ತು ಗ್ರಾಮದ ಜನರಿಗೆ ಮನೋಹರ್ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ” ಎಂದು ಘಟನೆಯ ವಿವರ ನೀಡಿದ್ದಾರೆ.

ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ತನಿಖೆ ಮುಂದುವರೆದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X