ಉತ್ತರ ಕನ್ನಡ | ಭಾರೀ ಮಳೆ ಮುನ್ಸೂಚನೆ; ಎಚ್ಚರ ವಹಿಸುವಂತೆ ಡಿಸಿ ಸೂಚನೆ

Date:

Advertisements

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕೆ ಸೂಚನೆ ನೀಡಿದ್ದಾರೆ.

ಇಂದು (ಜು.20) ಹಾಗೂ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾಹದ ಅಪಾಯ ಇರುವುದರಿಂದ ಸಂಪೂರ್ಣವಾಗಿ ನ್ಯಾಚುರೇಟೆಡ್ ಮಣ್ಣು ಮತ್ತು ಕಳವಳಕಾರಿ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ಮೇಲ್ಮೈ ಹರಿವು /ಮುಳುಗಡೆ ಸಂಭವಿಸಬಹುದೆಂದು ಮುನ್ಸೂಚನೆ ನೀಡಲಾಗಿರುವುದರಿಂದ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ.

ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿನ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವುದು. ನದಿ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುವುದು. ಅಘನಾಶಿನಿ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬಗ್ಗೆ ಕೇಂದ್ರಿಯ ಜಲ ಆಯೋಗ ಮುನ್ಸೂಚನೆಯನ್ನು ನೀಡಿರುತ್ತದೆ. ಗುಡ್ಡದ ಇಳಿಜಾರಿನ ಪ್ರದೇಶದಲ್ಲಿ ವಾಸಿಸುವರು ಕೂಡಾ ಮಳೆಯ ತೀವ್ರತೆಯನುಸಾರ ಸುರಕ್ಷತಾ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು ಮತ್ತು ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು.

Advertisements

ಇದನ್ನೂ ಓದಿ: ಉತ್ತರ ಕನ್ನಡ | ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆ

ತುರ್ತು ಸೇವೆಗೆ 24*7 ಕಂಟ್ರೋಲ್ ರೂಮ್ ಟೋಲ್ ಫ್ರೀ ಸಂಖ್ಯೆ 08382-229857 ಮತ್ತು ವಾಟ್ಸಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X