ವಿಧಾನಸಭೆಯಲ್ಲಿ ರಮ್ಮಿ ಆಡಿದ ಮಹಾರಾಷ್ಟ್ರ ಸಚಿವ ಮಾಣಿಕ್ರಾವ್ ಕೊಕಾಟೆ: ವಿಪಕ್ಷಗಳಿಂದ ಆಕ್ರೋಶ

Date:

Advertisements

ಮಹಾರಾಷ್ಟ್ರ ಕೃಷಿ ಸಚಿವ ಮಾಣಿಕ್ರಾವ್ ಕೊಕಾಟೆ ಅವರು ವಿಧಾನಸಭೆ ಅಧಿವೇಶನದ ಸಮಯದಲ್ಲಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ-ಶರದ್ ಪವಾರ್ ಬಣ) ಶಾಸಕ ರೋಹಿತ್ ಪವಾರ್ ಸೇರಿದಂತೆ ಹಲವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಕೃಷಿ ಸಚಿವ ಕೊಕಾಟೆ ಸದನದಲ್ಲಿ ಕುಳಿತು ಮೊಬೈಲ್‌ ನೋಡುತ್ತಿರುವುದು, ಅದರಲ್ಲಿ ರಮ್ಮಿ ಆಡುತ್ತಿರುವುದು ಕಂಡುಬಂದಿದೆ. “ರೈತರು ಮತ್ತು ಕೃಷಿಯ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿರುವ ಸಮಯದಲ್ಲಿ ರಾಜ್ಯ ಸಚಿವರು ‘ರಮ್ಮಿ’ ಎಂಬ ಆಟವನ್ನು ಆಡುತ್ತಿದ್ದಾರೆ” ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಕೃಷಿ ಸಚಿವರ ತವರಿನಲ್ಲಿಯೇ ಅತಿ ಹೆಚ್ಚು ರೈತರ ಆತ್ಮಹತ್ಯೆ

ಕೊಕಾಟೆಯನ್ನು ದಾರಿ ತಪ್ಪಿದ ಶಾಸಕ ಎಂದು ರೋಹಿತ್ ಪವಾರ್ ಕರೆದಿದ್ದಾರೆ. ಹಾಗೆಯೇ ರಾಜ್ಯದಲ್ಲಿ ರೈತರ ಆತ್ಮಹತ್ಯೆ, ಕೃಷಿ ಸಮಸ್ಯೆಗಳ ಬಗ್ಗೆ ಸಚಿವರು ಗಮನ ಹರಿಸುತ್ತಿಲ್ಲ ಎಂದು ಕೋಕಾಟೆ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ರಾಜ್ಯದಲ್ಲಿ ಪ್ರತಿದಿನ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅಧಿಕಾರದಲ್ಲಿರುವ ಎನ್‌ಸಿಪಿ ಬಣವು ಬಿಜೆಪಿಯನ್ನು ಸಂಪರ್ಕಿಸದೆ ಏನನ್ನೂ ಮಾಡಲು ಸಾಧ್ಯವಿಲ್ಲದ ಸ್ಥಿತಿಯಲ್ಲಿದೆ. ಲೆಕ್ಕವಿಲ್ಲದಷ್ಟು ಕೃಷಿ ಸಮಸ್ಯೆಗಳು ಬಾಕಿ ಉಳಿದಿದೆ ಮತ್ತು ದಿನನಿತ್ಯ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಕೃಷಿ ಸಚಿವರಿಗೆ ಬೇರೆ ಏನೂ ಮಾಡಲು ಸಾಧ್ಯವಾಗದೆ, ರಮ್ಮಿ ಆಡಲು ಸಮಯ ಸಿಕ್ಕಂತೆ ಕಾಣುತ್ತಿದೆ” ಎಂದು ಮರಾಠಿಯಲ್ಲಿ ಶಾಸಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಈ ದಾರಿ ತಪ್ಪಿದ ಸಚಿವರು ಮತ್ತು ಸರ್ಕಾರವು ಬೆಳೆ ವಿಮೆ, ಸಾಲ ಮನ್ನಾ ಮತ್ತು ಬೆಲೆ ಬೆಂಬಲವನ್ನು ಕೋರುವ ರೈತರ ಹತಾಶ ಮನವಿಯನ್ನು ಎಂದಾದರೂ ಕೇಳುತ್ತದೆಯೇ? ‘ಬಡ ರೈತರ ಹೊಲಗಳಿಗೆ ಕೆಲವೊಮ್ಮೆ ಬನ್ನಿ, ಮಹಾರಾಜ್” ಎಂದು ವ್ಯಂಗ್ಯವಾಡಿದ್ದಾರೆ.

ಈ ಘಟನೆಯು ವಿಪಕ್ಷಗಳಿಂದ ಭಾರೀ ಟೀಕೆಗೆ ಗುರಿಯಾಗಿದೆ. ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಅಸಡ್ಡೆ ಹೊಂದಿದೆ ಎಂದು ವಿಪಕ್ಷಗಳು ಆರೋಪಿಸಿದೆ. ವೀಡಿಯೊಗೆ ಪ್ರತಿಕ್ರಿಯಿಸಿದ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಆದರೆ ಈ ಎಲ್ಲ ಆರೋಪಗಳ ಬಗ್ಗೆ ಸಚಿವ ಕೊಕಾಟೆ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X