ರಾಯಚೂರು | ಸೋಲಾರ್ ಕಂಬಗಳ ಸ್ಥಾಪನೆಗೆ ಜಮೀನಿನ ಹಾನಿ; ರೈತರಿಂದ ಪರಿಹಾರದ ಆಗ್ರಹ

Date:

Advertisements

ಸೋಲಾರ ಯೋಜನೆಯಡಿಯಲ್ಲಿ ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಸ್ಥಾಪಿಸಲಾಗುತ್ತಿದ್ದು ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆದು ರೈತರನ್ನು ಬಂಧಿಸಿದ ಘಟನೆ ಸಿಂಧನೂರು ತಾಲ್ಲೂಕು ಜವಳಗೇರಾ ವ್ಯಾಪ್ತಿಯ ಸುಲ್ತಾನಪುರದಲ್ಲಿ ನಡೆದಿದೆ.

ಸೋಲಾರ್ ಕಂಬಗಳನ್ನು ಒಂದೊಂದಾಗಿ ಜೋಡಿಸುವ ಸಂದರ್ಭದಲ್ಲಿ ರೈತರ ಖಾಸಗಿ ಜಮೀನುಗಳಲ್ಲಿ ರಸ್ತೆ ಅಥವಾ ಹಾದಿ ನಿರ್ಮಾಣವಾಗುತ್ತಿದ್ದು, ಇದರಿಂದ ಜಮೀನಿಗೆ ಬಹಳಷ್ಟು ಹಾನಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಕೃಷಿಕರು ಪ್ರತಿ ಚದರ ಅಡಿ (Sq.ft)ಗೆ ₹2500 ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಈ ಬಗ್ಗೆ ರೈತ ಮುಖಂಡ ಬಸವರಾಜ ಗೋಡಿಹಾಳ ಮಾತನಾಡಿ, ಹಾಳೂರು ಸೋಲಾರ ಪವರ್ ಪ್ರವೇಟ್ ಕಂಪನಿಯವರು ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಅಳವಡಿಸಿದ್ದು ಕಂಬದಿಂದ ಕಂಬಕ್ಕೆ ಹೋಗುವ ಲೈನ್ ಕೆಳಗಡೆ ಬರುವ ರೈತರ ಜಮೀನಿಗೆ ಯಾವುದೇ ರೀತಿ ಪರಿಹಾರ ನೀಡದೆ ಹಾಗೆ ಲೈನ್ ಎಳೆದುಕೊಂಡು ಹೋಗುತ್ತಿದ್ದು ರೈತರು ಆ ಲೈನ್ ಕೆಳಗಡೆ ಮನೆ ಕಟ್ಟಲಾಗಲಿ, ಮರ ಬೆಳೆಸುವುದಾಗಲಿ ಇನ್ನಿತರ ವೈಯಕ್ತಿಕ ಚಟುವಟಿಕೆ ಮಾಡಲು ಬಾರದ ಕಾರಣ ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆದು ರೈತರನ್ನು ಬಂಧಿಸಿದ್ದಾರೆ.

1000154908

ಸೋಲಾರ್ ಕಂಬಗಳನ್ನು ಒಂದರಿಂದ ಮತ್ತೊಂದಕ್ಕೆ ಸಂಪರ್ಕಿಸಲು ಜಮೀನಿನಲ್ಲಿ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೃಷಿಭೂಮಿಯ ಪೆಳಕಿಗೆ ಹಾಗೂ ಉತ್ಪಾದನೆಗೆ ಭಾರೀ ನಷ್ಟವಾಗುತ್ತಿದೆ. ಹೀಗಾಗಿ ಈ ನಷ್ಟಕ್ಕೆ ತಕ್ಕಂತೆ ಪರಿಹಾರ ನೀಡಬೇಕು ಎಂದು ರೈತರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕೆಂದು ಮತ್ತು ರೈತರ ಬದುಕು ಹಾಳಾಗದಂತೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ನಂತರ ಪೊಲೀಸರು ಬಿಡುಗಡೆಗೊಳಿಸಿದರು.

1000154911
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X