ರಾಯಚೂರು | ಮೂಲಭೂತ ಸೌಕರ್ಯಗಳ ಕೊರತೆಗೆ ತರಗತಿ ಬಹಿಷ್ಕಾರ – ಕಾಲೇಜು ಮುಂಭಾಗ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು

Date:

Advertisements

ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಠಸ್ಥರಾದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದರು. ಕುಡಿಯುವ ನೀರು, ಶೌಚಾಲಯ, ಮತ್ತು ವರ್ಗೋಪಯೋಗಿ ಶಿಕ್ಷಕರ ಅಗತ್ಯ ಪೂರೈಕೆಯಾಗದೇ ಇದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಸ್ ಎಫ್ ಐ ನೇತೃತ್ವದಲ್ಲಿ ಪ್ರತಿಭಟನೆಯನ್ನು ಆರಂಭಿಸಿದರು.

ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ದೈನಂದಿನ ಶೈಕ್ಷಣಿಕ ಕ್ರಿಯೆಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಪ್ರತಿಭಟಿಸಿದರು.

ಕಾಲೇಜಿನಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಸಂಗಕ್ಕೆ ಅಗತ್ಯವಿರುವ ಟೀಚಿಂಗ್ ಎಯ್ಡ್, ಕುರ್ಚಿಗಳ ಕೊರತೆ ಹಾಗೂ ಇನ್ನೂ ಕೆಲವು ಕೋಣೆಗಳು ಕಳಪೆ ಸ್ಥಿತಿಯಲ್ಲಿದ್ದು, ಮಳೆ ಬಂದರೆ ಒಳಗೆ ನೀರು ಶೋಧಿಸುತ್ತಿದೆ ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಈ ಬಗ್ಗೆ ಕಾಲೇಜು ವಿದ್ಯಾರ್ಥಿ ನರಸಮ್ಮ ಮಾತನಾಡಿ, ಕಾಲೇಜಿನಲ್ಲಿ ಶೌಚಾಲಯ ಕಟ್ಟಡ ಪೂರ್ತಿ ಶಿಥಿಲಗೊಂಡು ಗೋಡೆ ಕುಸಿದಿದೆ. ಶೌಚಾಲಯದಲ್ಲಿ ನೀರು ವ್ಯವಸ್ಥೆಯಿಲ್ಲದೆ ಕೆಲವೊಮ್ಮೆ ಅನಿವಾರ್ಯ ಕಾರಣಕ್ಕೆ ಬಯಲಿಗೆ ಹೋಗಬೇಕಾಗಿದೆ. ಇಲ್ಲದಿದ್ದರೆ ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದೇನೆ. ಹಲವು ಬಾರಿ ಜನ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಗೆ ಗಮನಕ್ಕೆ ತಂದರು ಸ್ಪಂದಿಸಿಲ್ಲ ಎಂದು ಅಳಲು ತೋಡಿಕೊಂಡರು.

ಒಂದು ಶಿಕ್ಷಕನು ಮೂರು ದಿನವಷ್ಟೇ ಈ ಕಾಲೇಜಿಗೆ ಬಂದು, ಉಳಿದ ಮೂರು ದಿನ ಇನ್ನೊಂದು ಕಾಲೇಜಿಗೆ ತೆರಳುವ ವ್ಯವಸ್ಥೆಯಿಂದಾಗಿ ಪಠ್ಯಕ್ರಮ ಮುಗಿಯದ ಸ್ಥಿತಿ ಉಂಟಾಗಿದೆ ಎಂದು ವಿದ್ಯಾರ್ಥಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಮವಾರದಿಂದ ಬುಧವಾರದವರೆಗೂ ಮಾತ್ರ ಬರುವುದು. ಉಳಿದ ದಿನಗಳಲ್ಲಿ ನಾವು ಸ್ವಾಧ್ಯಯನದಲ್ಲಿಯೇ ನಂಬಿಕೆ ಇಟ್ಟುಕೊಳ್ಳಬೇಕು. ಪಠ್ಯಕ್ರಮ ಇನ್ನೂ ಅರ್ಧಕ್ಕಿಂತ ಹೆಚ್ಚು ಬಾಕಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ ಎಫ್ ಐ ಜಿಲ್ಲಾ ಮುಖಂಡ ರಮೇಶ್ ವೀರಾಪುರ ಮಾತನಾಡಿ, ಕಾಲೇಜು ಮೂಲಭೂತ ಸೌಲಭ್ಯಗಳಿಗಾಗಿ ಸಂಬಂಧಪಟ್ಟ ಇಲಾಖೆಗೆ ವಿದ್ಯಾರ್ಥಿಗಳ ನೇತೃತ್ವದಲ್ಲಿ ಮನವಿ ಸಲ್ಲಿಸಿದರು ತಮಗೆ ಸಂಬಂಧವಿಲ್ಲದಂತೆ ಇದ್ದಾರೆ. ಕಾಲೇಜು ಕೋಣೆಗಳು ಪೂರ್ತಿ ಶಿಥಿಲಗೊಂಡು ದಿನನಿತ್ಯ ಮೇಲ್ಛಾವಣಿ ಕುಸಿದು ಬೀಳುತ್ತಿವೆ. ಕಾಲೇಜ್ ಕೋಣೆಗಳ ಬೆಡ್ ತೆಗ್ಗ ಗುಂಡಿ,ಸಮತಟ್ಟವಾಗಿಲ್ಲ. ಮಕ್ಕಳು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

IMG 20250721 WA0026

ಕಾಲೇಜು ಉದ್ಘಾಟನೆ ,ಕಾರ್ಯಕ್ರಮಗಳಿಗೆ ಜನ ಪ್ರತಿನಿಧಿಗಳು ಬರುತ್ತಾರೆ. ಆದರೆ ಹೆಸರಿಗೆ ಮಾತ್ರ ಆಶ್ವಾಸನೆ ಯಾಗಿದೆ ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ತರಗತಿ ಬಹಿಷ್ಕರಿಸಿ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಈ ವೇಳೆ ಕಟ್ಟಡ ಕಾರ್ಮಿಕ ಮುಖಂಡ ನಿಂಗಪ್ಪ ನಿಲೋಗಲ್ , ಶಂಸು, ಶಾಲಾ ಮಕ್ಕಳು ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X