ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗಾಗಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

Date:

Advertisements

ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರ ಮಾಡಬೇಕು ಎಂದು ಯರಗೇರಾ ತಾಲ್ಲೂಕು ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಯಿತು.

ಬೆಂಗಳೂರು ಧರಣಿಗೆ ರಾಯಚೂರಿನ ಯರಗೇರ ಗ್ರಾಮದ ಹೋರಾಟಗಾರರು ರಂಗನಾಥ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸುಮಾರು 40 ಕ್ರಷರ್‌ಗಳಲ್ಲಿ ಕನಿಷ್ಠ 400 ಕ್ಕೂ ಅಧಿಕ ಜನರು ಬೆಂಗಳೂರಿಗೆ ತೆರಳಿ ಇಂದು ಪ್ರತಿಭಟಿಸಿದರು.

ಯರಗೇರಾ ಹೋಬಳಿಯು ತಾಲ್ಲೂಕು ಕೇಂದ್ರವಾಗಲು ಅಗತ್ಯವಿರುವ ಎಲ್ಲ ಅಂಶಗಳನ್ನು ಹೊಂದಿದೆ. ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಇಲ್ಲಿ ಸ್ಥಾಪಿತವಾಗಿದ್ದು, 326 ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ರಾಷ್ಟ್ರೀಯ ಹೆದ್ದಾರಿ 167 ರ ಬಳಿಯಲ್ಲಿರುವ ಈ ಪ್ರದೇಶದಲ್ಲಿ ಯೋಜನೆಗಳಿಗೆ ಯಾವುದೇ ತಾಂತ್ರಿಕ ಅಡಚಣೆಗಳಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸಿದರು.

ಯರಗೇರಾ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶವಾಗಿದ್ದು, ತುಂಗಭದ್ರಾ ಮತ್ತು ಕೃಷ್ಣಾ ನದಿಗಳ ನಡುವೆಯಿದ್ದರೂ ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ. ಒಟ್ಟು 19 ಗ್ರಾಮ ಪಂಚಾಯಿತಿಗಳ 78 ಗ್ರಾಮಗಳು ಈ ಹೋಬಳಿಗೆ ಸೇರಿವೆ. ಹೀಗಾಗಿ ತಾಲ್ಲೂಕು ಘೋಷಣೆಯಾಗುವುದು ನ್ಯಾಯಯುತ ಮತ್ತು ಅಗತ್ಯ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಬೈಕ್ ಬೆಂಕಿಗೀಡಾಗಿ ಭಸ್ಮ

ಧರಣಿಯಲ್ಲಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಮಹ್ಮದ್ ನಿಜಾಮುದ್ದೀನ್, ಬುಡ್ಡನಗೌಡ ಪಾಟೀಲ್, ನಟಿ ಪೂಜಾ ರಮೇಶ, ಮಲ್ಲಿಕಾರ್ಜುನ ರೆಡ್ಡಿ, ಬಸವರಾಜ್ ಹೂಗಾರ್, ವಿದ್ಯಾನಂದ್ ರೆಡ್ಡಿ, ತಾಯಪ್ಪ, ಮೊಮ್ಮದ್ ರಫಿ, ರಾಮರೆಡ್ಡಿ, ಬಸವರಾಜ ರೆಡ್ಡಿ, ಮಹದೇವ ನಾಯಕ್, ರಮೇಶ್, ವೆಂಕಟೇಶ್, ರವಿ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

Advertisements
1000155152
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X