ಶಾಸಕ ಪ್ರಭು ಚವ್ಹಾಣ ಪುತ್ರನಿಂದ ಮೋಸ ಆರೋಪ : ಯುವತಿ ಕುಟುಂಬಸ್ಥರ ವಿರುದ್ಧ ದೂರು ದಾಖಲು

Date:

Advertisements

ಬೀದರ್‌ ಜಿಲ್ಲೆಯ ಔರಾದ್‌ನ ಬಿಜೆಪಿ ಶಾಸಕ ಪ್ರಭು ಚವ್ಹಾಣ ಅವರ ಪುತ್ರ ಪ್ರತೀಕ್ ಚವ್ಹಾಣ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ಪ್ರತೀಕ್‌ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ಇದೀನ ಶಾಸಕ ಪ್ರಭು ಚವ್ಹಾಣ ಅವರ ಸಂಬಂಧಿಕರೊಬ್ಬರು ಯುವತಿಯ ಕುಟುಂಬದ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ʼಪ್ರಭು ಚವಾಣ್‌ ಅವರ ಮಗ ಪ್ರತೀಕ್‌ ಚವಾಣ್‌ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಾರಾಷ್ಟ್ರದ ಯುವತಿಯೊಬ್ಬರು ಮಹಿಳಾ ಪೊಲೀಸ್‌ ಠಾಣೆಗೆ ಭಾನುವಾರ ದೂರು ಕೊಟ್ಟಿದ್ದರು. ಈಗ ಆ ಯುವತಿಯ ಪೋಷಕರು, ಸಹೋದರ ಸೇರಿದಂತೆ ಎಂಟು ಜನರ ವಿರುದ್ಧ ಶಾಸಕರ ಸಂಬಂಧಿ ಮುರಳಿಧರ ಪ್ರಕಾಶ್‌ ಪವಾರ್‌ ಎಂಬುವರು ದೂರು ಕೊಟ್ಟಿದ್ದಾರೆ.

ಈ ಎಂಟು ಜನರ ಜತೆಗೆ ಇತರೆ 30ಕ್ಕೂ ಹೆಚ್ಚು ಜನರ ತಂಡ ಇದೇ ಜುಲೈ 5ರಂದು ರಾತ್ರಿ 8.30ರ ಸುಮಾರಿಗೆ ಅಕ್ರಮವಾಗಿ ಮನೆಗೆ ನುಗ್ಗಿ ಕಲ್ಲು, ಕಟ್ಟಿಗೆ ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಾಸಕರು ತಪ್ಪಿಸಿಕೊಂಡಿದ್ದು, ನನಗೆ ಬೆನ್ನು ಹಾಗೂ ಟೊಂಕದ ಮೇಲೆ ಗಾಯಗಳಾಗಿವೆ. ಘಟನೆಯಲ್ಲಿ ಶಾಸಕರ ಪುತ್ರ ಪ್ರತೀಕ್ ಚವಾಣ್ ಹಾಗೂ ಅಮಿತ್‌ ರಾಠೋಡ್ ಅವರಿಗೂ ಗಾಯವಾಗಿದೆ. ಮನೆಯಲ್ಲಿದ್ದ ಮಹಿಳೆಯರನ್ನು ಬಿಡದೆ ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಗೆ ಮುಖಂಡ ದೀಪಕ್‌ ಪಾಟೀಲ್‌ ಚಾಂದೋರಿ ಅವರ ಕುಮ್ಮಕು ಕಾರಣʼ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X