ಶಿವಮೊಗ್ಗ | ಸರ್ಕಾರದಿಂದ ಉಚಿತ ಸಿಂಟೆಕ್ಸ್ ಭಾಗ್ಯ ಅಂತ ನಂಬಿಸಿ ; ವಿಚಿತ್ರ ಮನೆಗಳ್ಳತನ

Date:

Advertisements

ಶಿವಮೊಗ್ಗ, ಕಳ್ಳರು ಸಹ ಹೊಸ ಹೊಸ ದಾರಿಗಳನ್ನು ಕಳ್ಳತನಕ್ಕಾಗಿ ಹುಡುಕುತ್ತಿದ್ದಾರೆ. ಅದರಲ್ಲಿಯು ಸುಲಭದ ದಾರಿಗಳು ಕಳ್ಳತನಕ್ಕೆ ಸಿಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕುತೂಹಲಕಾರಿ ಹಾಗೂ ಆತಂಕಕಾರಿ ಘಟನೆಯೊಂದು ಶಿಕಾರಿಪುದಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ₹6 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ₹30,000 ನಗದು ಕಳವು ಮಾಡಲಾಗಿದೆ. ವಿಶೇಷ ಅಂದರೆ, ಕಳ್ಳತನಕ್ಕೆ ಬಂದವರು ಹಂಚು ತೆಗೆದಾಗಲಿ, ಹಿಂಬಾಗಿಲು ಒಡೆದಾಗಲಿ, ಮುಂಬಾಗಿಲ ಬೀಗ ಮುರಿದಾಗಲಿ ಕಳ್ಳತನವೆಸಗಿಲ್ಲ.

ಒಂದು ಸುಳ್ಳು ಹೇಳುವ ಮೂಲಕ ಕಳ್ಳತನ ಎಸೆಗಿದ್ದಾರೆ. ಇಲ್ಲಿ ಕಳ್ಳತನವೆಸಗಿದ ಕಳ್ಳರು ಸರ್ಕಾರದಿಂದ ಉಚಿತವಾಗಿ ಸಿಂಟೆಕ್ಸ್ ಟ್ಯಾಂಕ್ ನೀಡುವುದಾಗಿ ಹೇಳಿ ಕಳ್ಳತನ ಎಸಗಿದ್ದಾರೆ.

Advertisements

ಸರ್ಕಾರದಿಂದ ಉಚಿತವಾಗಿ ಸಿಂಟೆಕ್ಸ್ ಬಾಗ್ಯ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಮನೆಯ ಮಾಲೀಕ ಮಹಿಳೆಯನ್ನು ಇಬ್ಬರು ನಂಬಿಸಿದ್ದಾರೆ. ಅದಕ್ಕಾಗಿ ಜಾಗ ಪರಿಶೀಲನೆ ನಡೆಸಬೇಕು ಎಂದು ಒಬ್ಬ ವ್ಯಕ್ತಿ ಮನೆಯಲ್ಲಿದ್ದ ಮಹಿಳೆಯನ್ನು ಮಹಡಿ ಮೇಲೆ ಕರೆದುಕೊಂಡು ಹೋಗಿ ಸಿಂಟೆಕ್ಸ್ ಕುರಿತು ಮಾಹಿತಿ ಕಲೆಹಾಕಲು ಆರಂಭಿಸಿದ್ದ.

ಇತ್ತ ಆತನ ಜೊತೆಗೆ ಬಂದಿದ್ದ ಮತ್ತೊಬ್ಬ ಕಳ್ಳ ಮನೆಯ ಕೆಳಭಾಗದಲ್ಲಿ ಬೀರುವಿನಲ್ಲಿದ್ದ ಮಾಂಗಲ್ಯ ಸರ, 2 ಚೈನ್, ಅವಲಕ್ಕಿ ಸರ, 2 ಉಂಗುರ, ಕಿವಿ ಓಲೆ, ಜುಮುಕಿ ಸೇರಿದಂತೆ ಒಟ್ಟು 120 ಗ್ರಾಂ ಬಂಗಾರದ ಆಭರಣ ಹಾಗೂ ₹30,000 ನಗದನ್ನು ದೋಚಿದ್ದಾನೆ . ಕೃತ್ಯ ಎಸಗಿದ ನಂತರ ಇಬ್ಬರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಈ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ., ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X