ಯಾದಗಿರಿ | ರಸ್ತೆ ಕಳಪೆ ಕಾಮಗಾರಿ ಆರೋಪ; ‘ಬಿಲ್’ ಪಾವತಿ ತಡೆಗೆ ಆಗ್ರಹ

Date:

Advertisements

ವಡಗೇರಾ ತಾಲೂಕಿನ ಗಡ್ಡೆಸೂಗೂರ ಮತ್ತು ಹುಲಕಲ್(ಜೆ) ಗ್ರಾಮದ ನಡುವೆ ಇರುವ ರಸ್ತೆಯ ಕಳಪೆ ಕಾಮಗಾರಿ ನಡೆದಿದೆ. ಕಳಪೆ ಗುಣಮಟ್ಟದಲ್ಲಿ ಕಾಮಗಾರಿ ನಡೆಸಿ, ಹೆಚ್ಚು ‘ಬಿಲ್‌ ಕ್ಲೈಮ್’ ಮಾಡಲಾಗಿದೆ. ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಬಿಲ್‌ ಪಾವತಿ ಮಾಡದಂತೆ ತಡೆಯಬೇಕು ಎಂದು ಭೀಮ್‌ ಆರ್ಮಿ ಕರ್ನಾಟಕ ಏಕ್ತಾ ಮಿಷನ್ ಆಗ್ರಹಿಸಿದೆ.

ಯಾದಗಿರಿ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಕಾರ್ಯಪಾಲಕ ಅಭಿಯಂತರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿರುವ ಕಾರ್ಯಕರ್ತರು, ರಸ್ತೆ ಕಾಮಗಾರಿ ಮತ್ತು ಗುಣಮಟ್ಟದ ಕುರಿತು ತನಿಖೆ ನಡೆಬೇಕೆಂದು ಒತ್ತಾಯಿಸಿದ್ದಾರೆ.

“ಉಭಯ ಗ್ರಾಮಗಳ ನಡುವಿನ ರಸ್ತೆ ಕಾಮಗಾರಿಯನ್ನು ಅಂದಾಜು ಪಟ್ಟಿ ಪ್ರಕಾರ ನಡೆಸಲಾಗಿಲ್ಲ. ಬೇಕಾಬಿಟ್ಟಿಯಾಗಿ ಕಾಮಗಾರಿ ನಡೆಸಲಾಗಿದೆ. ರಸ್ತೆಯ ಲೆವೆಲಿಂಗ್ ಮಾಡಿಲ್ಲ. ಜೆ.ಇ ಅವರಿಂದ ರಸ್ತೆಯ ಎಸ್ಟಿಮೇಟ್ ಹೇಳಿದರೆ, ಒಂದು ತಿಂಗಳಾದರೂ ನೀಡಿಲ್ಲ” ಎಂದು ಆರೋಪಿಸಿದ್ದಾರೆ.

Advertisements

“ಕಾಮಗಾರಿಯ ತನಿಖೆ ಆಗುವವರೆಗೂ ಬಿಲ್ ಪಾವತಿ ಮಾಡಬಾರದು. ಸಂಬಂಧಪಟ್ಟ ಜೆ.ಇ ಮತ್ತು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಸೈದಪ್ಪ.ಎಂ, ಮರೆಪ್ಪ, ಶಾಂತು ಮ್ಯಾಗೇರಿ, ಹಣಮಂತ ವಡಗೇರಾ, ಚಾಂದು ಹುಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X