ಬೆಂಗಳೂರು | ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಣೆ; ವಿದ್ಯಾರ್ಥಿ ಮೇಲೆ ಯುವತಿಯ ಗುಂಪಿನಿಂದ ಹಲ್ಲೆ

Date:

Advertisements
  • ಆರು ಜನರ ವಿರುದ್ಧ ಜೆಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ ಯುವತಿ

ಸ್ನೇಹಿತನ ಜನ್ಮದಿನಾಂಕ ಹೇಳಲು ನಿರಾಕರಿಸಿದವನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜೆಪಿ ನಗರ ಠಾಣಾ ವ್ಯಾಪ್ತಿಯ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜು ಬಳಿ ನಡೆದಿದೆ.

ಮಹಮ್ಮದ್ ಅಜೀಮ್ ಪಾಷ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ಮಾಡಿದ ಆರೋಪದಡಿ ಆತನ ಜ್ಯೂನಿಯರ್ ವಿದ್ಯಾರ್ಥಿ‌ನಿ, ಆಕೆಯ ಸಹೋದರ ಮತ್ತು ಆತನ ಸ್ನೇಹಿತರು ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಏನಿದು ಘಟನೆ?

Advertisements

ಮಹಮ್ಮದ್ ಅಜೀಮ್ ಪಾಷ ಎಂಬ ವಿದ್ಯಾರ್ಥಿ ಬೆಂಗಳೂರಿನ ಪ್ರೆಸಿಡೆನ್ಸಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಾನೆ. ಇತ್ತೀಚೆಗೆ ಈತನಿಗೆ ಪರಿಚಯ ಇರುವ ಮಹಮ್ಮದ್ ಉಬೇದ್ ಉಲಾ ಎಂಬುವರು ಅದೇ ಕಾಲೇಜಿಗೆ ಪ್ರಥಮ ಪಿಯುಸಿಗೆ ಪ್ರವೇಶ ಪಡೆದಿದ್ದರು.

ಜುಲೈ 22ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಿನಿಯರ್ಸ್​​​ ವೆಲ್ ಕಮ್ ಡೇ ಏರ್ಪಡಿಸಿದ್ದರು. ಈ ದಿನ ಮಹಮ್ಮದ್ ಅಜೀಮ್ ಪಾಷ ಅವರಿಗೆ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ಓರ್ವ ವಿದ್ಯಾರ್ಥಿನಿ ಪರಿಚಯವಾಗಿದ್ದಾಳೆ.

ಜುಲೈ 24ರಂದು ಅಜೀಮ್ ಪಾಷಾ ಅವರನ್ನು ಯುವತಿ ಹೊರಗಡೆ ಕರೆದುಕೊಂಡು ಹೋಗಿ ನಿನ್ನ ಸ್ನೇಹಿತ ಮಹಮ್ಮದ್ ಉಬೇದ್ ಉಲಾ ಅವರ ಜನ್ಮದಿನಾಂಕ ತಿಳಿಸುವಂತೆ ಕೇಳಿದ್ದಾಳೆ. ಈ ವೇಳೆ, ಮಹಮ್ಮದ್ ಅಜೀಮ್ ಪಾಷಾ ತನಗೆ ಈ ಬಗ್ಗೆ ಮಾಹಿತಿ ಇಲ್ಲವೆಂದು ಹೇಳಿದ್ದಾನೆ.

ಮರುದಿನ ಜು.25 ರಂದು ಮಧ್ಯಾಹ್ನ ಕಾಲೇಜಿನಲ್ಲಿ ವಿಶ್ರಾಂತಿ ಸಮಯಕ್ಕೆ ಬಿಟ್ಟಾಗ ವಿದ್ಯಾರ್ಥಿನಿ ಮಹಮ್ಮದ್ ಉಬೇದ್ ಉಲಾ ಜನ್ಮ ದಿನಾಂಕವನ್ನು ನೀಡಲಿಲ್ಲ, ನಿನಗೆ ನಾನು ಯಾರೆಂದು ತೋರಿಸುತ್ತೇನೆ ಎಂದು ಮಹಮ್ಮದ್ ಅಜೀಮ್ ಪಾಷಗೆ ಬೆದರಿಕೆ ಹಾಕಿದ್ದಾಳೆ.

ಮಾರನೇ ದಿನ ಯುವತಿ ಝನ್ ಮತ್ತು ಶೇಕ್ ಸೇರಿದಂತೆ ಐವರನ್ನು ಕಾಲೇಜು ಬಳಿ ಕರೆಸಿ ಮಹಮ್ಮದ್ ಅಜೀಮ್ ಪಾಷಾ ಅವರನ್ನು ಕಾಲೇಜಿನಿಂದ ಬಲವಂತವಾಗಿ ಕಾಕ್ ಮ್ಯಾಜಿಕ್ ಬಳಿಗೆ ಕರೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೋಟೆಲ್ ದರ ಏರಿಕೆ ವಿರುದ್ಧ ವಾಟಾಳ್ ನಾಗರಾಜ್ ಮುದ್ದೆ ಪ್ರತಿಭಟನೆ

ನಂತರ ಜಯನಗರ 4ನೇ ಟಿ ಬ್ಲಾಕ್ ನಲ್ಲಿರುವ ಬಿ.ಇ.ಎಸ್ ಕಾಲೇಜಿನ ಬಳಿ ಕರೆದುಕೊಂಡು ಹೋಗಿ ಇನ್ನಷ್ಟು ಥಳಿಸಿ, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಸಿ ಹೋಗಿದ್ದಾರೆ ಎಂದು ಮಹಮ್ಮದ್ ಅಜೀಮ್ ಪಾಷ ದೂರಿನಲ್ಲಿ ದಾಖಲಿಸಿದ್ದಾರೆ.

ಸದ್ಯ ಘಟನೆ ಸಂಬಂಧ ಗಾಯಾಳು ವಿದ್ಯಾರ್ಥಿ ನೀಡಿರುವ ದೂರಿನನ್ವಯ ಜೆ.ಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X