ತುಮಕೂರು | ಎಸ್‌ಎಸ್‌ಐಟಿಯ ಡಾ.ಪ್ರವೀಣ್ ಕುಮಾರ್‌ಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ  

Date:

Advertisements

ನಾಯಕತ್ವ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ನೀಡಲಾಗುವ ‘ವರ್ಷದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಗೆ’ ನಗರದ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಕುಮಾರ್ ವೈ ಜಿ  ಭಾಜನಾಗಿದ್ದಾರೆ.

ಮಂಗಳೂರಿನ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆ ಇತ್ತೀಚಿಗೆ ಆಯೋಜಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಯನ್ನು ಡಾ. ಪ್ರವೀಣ್ ಕುಮಾರ್ ಅವರಿಗೆ ಸಂಸ್ಥೆಯ ಸಿಇಒ ಡಾ. ಗುರುತೇಜ್ ಮತ್ತು ಡಾ. ಫ್ರಾನ್ಸಿಸ್ಕಟ್ ತೇಜ್ ಅವರು ಪ್ರಧಾನ ಮಾಡಿದರು.

ಕ್ರಿಯಾತ್ಮಕ, ನವೀನ ಮತ್ತು ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಶೈಕ್ಷಣಿಕ ಕ್ಷೇತ್ರದ ಸಾಧಕರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಇದೇ ರೀತಿ ಡಾ. ಪ್ರವೀಣ್ ಕುಮಾರ್ ಅವರು ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಟೀಮ್ ವಿಜ್ಡಮ್ ಎಜುಕೇಶನ್ ಸಂಸ್ಥೆಯಿಂದ ‘ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿಯನ್ನು ಪಡೆದರು. 

Advertisements

ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಯನ್ನು ತರುವಲ್ಲಿ ನಿರತರಾಗಿರುವ ಡಾ. ಪ್ರವೀಣ್ ಕುಮಾರ್ ಅವರಿಗೆ ಡೈನಾಮಿಕ್ ಪರ್ಸನಾಲಿಟಿ ಪ್ರಶಸ್ತಿ ಲಭಿಸಿರುವುದಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಸೇರಿದಂತೆ ವಿಭಾಗದ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X