ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ : ಮಲ್ಲಿಕಾರ್ಜುನ ಖರ್ಗೆ

Date:

Advertisements
  • ‘ದೂರದ ಗುಜರಾತ್‌ನಿಂದ ಆದೇಶ ಬಂದಾಗ ಕೇವಲ 24 ಗಂಟೆಯಲ್ಲಿ ಎಲ್ಲವೂ ಮುಗಿದಿತ್ತು’ ಎಂದ ಎಐಸಿಸಿ ಅಧ್ಯಕ್ಷ
  • ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ : ರಾಹುಲ್ ಗಾಂಧಿ

‘ಗುಜರಾತ್ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದ್ದ ಕೇವಲ 24 ಗಂಟೆಯೊಳಗೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ಅನರ್ಹತೆಗೊಳಿಸಲಾಗಿತ್ತು. ಈಗ ಸುಪ್ರೀಂ ಆದೇಶದ ಬಳಿಕ ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ’ ಎಂದು ಕಾದು ನೋಡಬೇಕಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾರ್ಮಿಕವಾಗಿ ಹೇಳಿದರು.

ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧಿಯವರಿಗೆ ಗುಜರಾತ್ ಹೈಕೋರ್ಟ್‌ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶದಲ್ಲಿ ತಡೆ ನೀಡಿದ ಬಳಿಕ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ಮುಖಂಡರೊಂದಿಗೆ ಸುದ್ದಿಗೋಷ್ಠಿ ವೇಳೆ ಅವರು ಮಾತನಾಡಿದರು.

‘ಗುಜರಾತ್ ದೆಹಲಿಯಿಂದ ಸುಮಾರು 500-600 ಕಿಮೀ ದೂರದಲ್ಲಿದೆ. ಅಲ್ಲಿಯ ಆದೇಶ ಬಂದ ಬಳಿಕ, ಕೇವಲ 24 ಗಂಟೆಯೊಳಗೆ ಅನರ್ಹತೆ, ಲೋಕಸಭೆಯಿಂದ ಹೊರಹಾಕುವುದು ಎಲ್ಲವೂ ನಡೆಯಿತು. ಈಗ ಸುಪ್ರೀಂ ಕೋರ್ಟು ಮತ್ತು ನಮ್ಮ ಲೋಕಸಭೆಗೆ ಕೆಲವೇ ಕಿ ಮೀ ಅಂತರವಿದೆ. ಹಾಗಾಗಿ, ಎಷ್ಟು ಗಂಟೆಯೊಳಗಡೆ ಅನರ್ಹತೆ ಹಿಂಪಡೆಯಲಿದ್ದಾರೆ ಎಂದು ಕಾದು ನೋಡಬೇಕಿದೆ. ಇಷ್ಟರವರೆಗೆ ಕಾದು ನೋಡಿದ ನಮಗೆ, ಇದು ಕೂಡ ಏನೂ ದೊಡ್ಡದಲ್ಲ. ಇವತ್ತು ರಾತ್ರಿಯೇ ಅನರ್ಹತೆ ಹಿಂಪಡೆಯಲಿ ಎಂಬುದು ನಮ್ಮ ಬಯಕೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Advertisements

‘ಇಂದು ಬಹಳ ಸಂತೋಷದ ದಿನ. ಪ್ರಜಾಪ್ರಭುತ್ವ ಗೆದ್ದಿದೆ, ಸಂವಿಧಾನ ಗೆದ್ದಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4 ಸಾವಿರ ಕಿಲೋ ಮೀಟರ್ ಪಾದಯಾತ್ರೆ ಮಾಡಿದ್ದರು. ಈ ಜಯ ಎಲ್ಲ ಜನರ ಪ್ರಾರ್ಥನೆಯ ಫಲ. ಆದರೆ ಈ ಆದೇಶ ಬಂದ ಬಳಿಕ ಬಿಜೆಪಿಯವರಿಗೆ ನಿರಾಶೆಯಾಗಿರಬಹುದು’ ಎಂದು ಖರ್ಗೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿದ್ದ ರಾಹುಲ್ ಗಾಂಧಿ ಹೆಚ್ಚು ಮಾತನಾಡದೆ, ‘ಇಂದಲ್ಲ ನಾಳೆ, ಅಥವಾ ನಾಡಿದ್ದು ಜಯ ಸಿಕ್ಕೇ ಸಿಗುತ್ತದೆ. ನನ್ನ ದಾರಿ ಯಾವುದು, ನನ್ನ ಕೆಲಸ ಏನು ಎಂಬುದರ ಬಗ್ಗೆ ನನ್ನಲ್ಲಿ ಸ್ಪಷ್ಟತೆ ಇದೆ. ತುಂಬಾ ಮಂದಿ ಸಹಾಯ ಮಾಡಿದ್ದಾರೆ. ಜನರು ಪ್ರೀತಿ, ಸಹಕಾರ ತೋರಿದ್ದಾರೆ. ಅವರ ಪ್ರೀತಿಗೆ ಧನ್ಯವಾದ ಸಲ್ಲಿಸುತ್ತೇನೆ. ‘ ಎಂದಷ್ಟೇ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X