ಕೊಪ್ಪಳ | 102 ಕೆಜಿ ತೂಕದ ಜೋಳದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ 61 ವರ್ಷದ ವ್ಯಕ್ತಿ

Date:

Advertisements

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಹನ್ನೂರ ಗ್ರಾಮದ ನಿಂಗಪ್ಪ ಸವಣೂರ ಎನ್ನುವ 61 ವರ್ಷದ ವ್ಯಕ್ತಿಯೊಬ್ಬರು 102 ಕೆಜಿ ತೂಕದ ಜೋಳದ ಮೂಟೆ ಬೆನ್ನ ಮೇಲೆ ಹೊತ್ತು ಮಂಗಳವಾರ 575 ಮೆಟ್ಟಿಲುಗಳು ಇರುವ ತಾಲ್ಲೂಕಿನ ಅಂಜನಾದ್ರಿಯ ಬೆಟ್ಟ ಹತ್ತಿ ಗಮನ ಸೆಳೆದರು.

ಬೆಟ್ಟದ ಕೆಳಭಾಗದಲ್ಲಿರುವ ಪಾದಗಟ್ಟೆಗೆ ನಮಸ್ಕರಿಸಿ ಮೂಟೆ ಹೊತ್ತ ನಿಂಗಪ್ಪ ಎಲ್ಲಿಯೂ ನಿಲ್ಲದೇ ಒಂದು ತಾಸು ಎರಡು ನಿಮಿಷದಲ್ಲಿ ಶ್ರೀರಾಮ ಹಾಗೂ ಹನುಮನ ಸ್ಮರಣೆ ಮಾಡುತ್ತ ಬೆಟ್ಟ ಏರಿದರು. ನಂತರ ಜೋಳವನ್ನು ದೇವಸ್ಥಾನಕ್ಕೆ ಅರ್ಪಿಸಿ ದರ್ಶನ ಪಡೆದರು.

ಅತ್ಯಂತ ಸಂಕೀರ್ಣ ಮತ್ತು ಕಡಿದಾದ ದಾರಿ ಹೊಂದಿರುವ ಅಂಜನಾದ್ರಿ ಬೆಟ್ಟವು ನೆಲಮಟ್ಟದಿಂದ 550ಕ್ಕೂ ಹೆಚ್ಚು ಅಡಿ ಎತ್ತರದಲ್ಲಿದೆ. ಈ ಬೆಟ್ಟಕ್ಕೆ ಹತ್ತಲು 575 ಮೆಟ್ಟಿಲುಗಳಿದ್ದು, ಸಾಮಾನ್ಯ ಜನರೇ ಈ ಬೆಟ್ಟ ಹತ್ತಲು ಪ್ರಯಾಸ ಪಡುತ್ತಾರೆ. ಆದರೆ ಹರಕೆ ತೀರಿಸಲು ವ್ಯಕ್ತಿಯೊಬ್ಬರ ಹರಸಾಹಸ ಮಾಡಿದ್ದು ಹುಬ್ಬೇರಿಸುವಂತೆ ಮಾಡಿತು.

Advertisements

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ನಿಂಗಪ್ಪ ʼಈ ಹಿಂದೆ ಶ್ರೀಶೈಲದಿಂದ ಆಂಜನಾದ್ರಿಗೆ ಬಂದಾಗ ಜೋಳದ ಮೂಟೆ ಹೊತ್ತು ಮುಂದೊಂದು ದಿನ ಬೆಟ್ಟ ಏರುವುದಾಗಿ ಹರಕೆ ಕಟ್ಟಿಕೊಂಡಿದ್ದೆ. ಈಗ ಆ ಬೇಡಿಕೆ ಈಡೇರಿದೆ. ದೇವರು ಆರೋಗ್ಯ ಚೆನ್ನಾಗಿ ಇಟ್ಟಿರುವುದರಿಂದಲೇ ಬೆಟ್ಟ ಏರಲು ಸಾಧ್ಯವಾಗಿದೆʼ ಎಂದು ಹರ್ಷ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X