ಗದಗ | ಕೇರಳದ ಮಾಜಿ ಸಿಎಂ ಅಚ್ಯುತಾನಂದನ್‌ಗೆ: ನುಡಿನಮನ

Date:

Advertisements

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮೃತರಾದ ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್‌ ಅಚ್ಯುತಾನಂದನ್ ಅವರಿಗೆ ಸಿಪಿಐಎಂ ಪಕ್ಷದ ವತಿಯಿಂದ  ನುಡಿನಮನ ಸಲ್ಲಿಸಲಾಯಿತು.

ಈ ವೇಳೆಯಲ್ಲಿ ಸಿಪಿಐಎಂ ಪಕ್ಷದ  ಜಿಲ್ಲಾ ಸಮಿತಿ ಸದಸ್ಯ  ಎಂ.ಎಸ್.ಹಡಪದ ಮಾತನಾಡಿ, “ಅಚ್ಯುತಾನಂದನ್ ಸಾರ್ವಜನಿಕ ಜೀವನದಲ್ಲಿ ನ್ಯಾಯ ಮತ್ತು ಜನ ಸಾಮಾನ್ಯರ ಹಿತದ ಪರವಾಗಿ ದೃಢವಾದ ಧ್ವನಿಯಾಗಿದ್ದರು. ಹೋರಾಟದ ವೇಳೆಯಲ್ಲಿ, ಕೇರಳದ ಮುಖ್ಯಮಂತ್ರಿಯಾಗಿಯೂ ಸೇರಿದಂತೆ ಅಧಿಕಾರದ ಸ್ಥಾನಗಳಲ್ಲಿ ಅವರು ತಮ್ಮ ತತ್ವಗಳಿಗೆ ನಿಷ್ಠರಾಗಿದ್ದರು. ಅವರ ನಿಧನದಿಂದಾಗಿ ಇಡೀ ಕಾರ್ಮಿಕ ವರ್ಗಕ್ಕೆ ನಮ್ಮ ಪಕ್ಷಕ್ಕೆ ತುಂಬಾಲಾರದ  ನಷ್ಟವಾಗಿದೆ” ಎಂದರು.

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಮಾತನಾಡಿ, “ತಮ್ಮ  17 ನೇ ವಯಸ್ಸಿಗೆ ದೇಶದ ಸ್ವತಂತ್ರ್ಯ ಹೋರಾಟಕ್ಕೆ ಅರ್ಪಿಸಿಕೊಂಡವರು. ಭಾರತದ ಬಹು ದೊಡ್ಡ ರೈತ ಕಾರ್ಮಿಕರ ಹೋರಾಟಗಳಲ್ಲೊಂದಾದ ಪುನ್ನಪ್ರ ವಯಲಾರ್ ಸಂಘರ್ಷದಲ್ಲಿ ಪೊಲೀಸರ ವಿಚಿತ್ರ ಹಿಂಸೆಗಳಿಗೆ ಒಳಗಾದವರು. ತೆಂಗಿನ ನಾರು ಕಾರ್ಮಿಕರ, ಕೃಷಿಕೂಲಿಕಾರರ  ಸಂಘಟನೆಗಳ ಸ್ಥಾಪಕರು. ಭೂ ಹೋರಾಟದ ಧೀರರು.  ನೂರೊಂದು ವರ್ಷಗಳ ಹೋರಾಟದ ಬದುಕು, ಸರಳ ತುಂಬು ಜೀವನ. ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ನಿರ್ಮೂಲನೆ ಕ್ರಮಗಳಿಗೆ ಹೆಸರಾದವರು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಮಂಡ್ಯ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಮೂವರು ನೌಕರರು

ಸಿಪಿಐಎಂ ಶಾಖಾ ಕಾರ್ಯದರ್ಶಿ ದಾವಲಸಾಬ ತಾಳಿಕೋಟಿ, ಜಿಲ್ಲಾ ಸಮಿತಿ ಸದಸ್ಯರಾದ ಮೆಹಬೂಬ್ ಹವಾಲ್ದಾರ್, ಪೀರು ರಾಠೋಡ, ಚಂದ್ರು ರಾಠೋಡ, ಚೆನ್ನಪ್ಪ ಗುಗಲ್ತೋತ್ತರ, ಕನಕರಾಯ ಹಾದಿಮನಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X