ಶಿವಮೊಗ್ಗ | ರಾತ್ರಿ ಕಾರಲ್ಲಿ ತೆರಳುತ್ತಿದ್ದವರನ್ನು ಕರೆದು ನಿಲ್ಲಿಸಿ ಹಲ್ಲೆ

Date:

Advertisements

ಶಿವಮೊಗ್ಗ, ಕಾರಿನಲ್ಲಿ ತೆರಳುತ್ತಿದ್ದವರನ್ನು ಕೂಗಿ ಕರೆದ ಅಪರಿಚಿತರು, ಜಗಳ ತೆಗೆದು ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸಾಗರ ರಸ್ತೆಯ ಬಾರ್ ಒಂದರ ಮುಂದೆ ಕಳೆದ ರಾತ್ರಿ ೧೧.೩೦ರ ಹೊತ್ತಿಗೆ ಘಟನೆ ಸಂಭವಿಸಿದೆ.

ಉದ್ಯಮಿ ಪ್ರದೀಪ್, ಯೋಗೀಶ್ ಗೌಡ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರದೀಪ್, ಯೋಗೀಶ್ ಗೌಡ ಮತ್ತು ದಾಮೋದರ ಎಂಬುವವರು ಗಾಡಿಕೊಪ್ಪದ ಸಮೀಪದ ಬಿರಿಯಾನಿ ಹೊಟೇಲ್‌ನಲ್ಲಿ ಊಟ ಮುಗಿಸಿ ಕಾರಿನಲ್ಲಿ ಹಿಂತಿರುಗುತ್ತಿದ್ದರು.

Advertisements

ಸಾಗರ ರಸ್ತೆಯ ಬಾರ್ ಒಂದರ ಮುಂದೆ ಆರೇಳು ಜನರು ಗುಂಪಾಗಿದ್ದರು. ಕಾರು ಅವರನ್ನು ದಾಟಿ ಹೋಗುತ್ತಿದ್ದಂತೆ ಅವರು ಜೋರಾಗಿ ಹೋಯ್ ಎಂದು ಕೂಗಿದ್ದರು.

ಪರಿಚಿತರಿರಬಹುದೆಂದು ಪ್ರದೀಪ್ ಕಾರು ನಿಧಾನ ಮಾಡಿ ಹಾರನ್ ಮಾಡಿದ್ದಾರೆ. ಆಗ ಗುಂಪಿನಲ್ಲಿದ್ದವರು ಅವಾಚ್ಯವಾಗಿ ನಿಂದಿಸಿ, ಹೋಗು ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಆಗ ಕಾರಿನಲ್ಲಿದ್ದವರು ಬೈದಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಆಗ ಗುಂಪಿನಲ್ಲಿದ್ದವರು ಬೈಕುಗಳನ್ನು ತಂದು ಅಡ್ಡಗಟ್ಟಿದ್ದಾರೆ. ಕಾರಿನಲ್ಲಿದ್ದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X