ವಂದೇ ಭಾರತ್ ರೈಲಿನ ಊಟದಲ್ಲಿ ಕೀಟ ಪತ್ತೆ: ಪೋಸ್ಟ್ ವೈರಲ್

Date:

Advertisements

ಭಾರತೀಯ ರೈಲ್ವೆಯ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಊಟದಲ್ಲಿ ಕೀಟ ಪತ್ತೆಯಾಗಿದೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರಯಾಣಿಕರೊಬ್ಬರು ಪೋಸ್ಟ್ ಒಂದನ್ನು ಮಾಡಿದ್ದಾರೆ. ಚಿತ್ರದಲ್ಲಿ ದಾಲ್‌ನಲ್ಲಿ ಕೀಟ ತೇಲುತ್ತಿರುವುದು ಕಂಡುಬಂದಿದೆ. ಸದ್ಯ ಪೋಸ್ಟ್ ವೈರಲ್ ಆಗಿದೆ.

ಭಾರತದ ಪ್ರೀಮಿಯಂ ರೈಲು ಸೇವೆಗಳಲ್ಲಿ ಒಂದೆಂದು ಪರಿಗಣಿಸಲಾದ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯ ಮಾನದಂಡಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿರಳೆ, ಇತರೆ ಕೀಟ ಪತ್ತೆಯಾಗಿದೆ. ಹಲಸಿದ ಆಹಾರ ನೀಡಿರುವುದೂ ವರದಿಯಾಗಿದೆ.

ಇದನ್ನು ಓದಿದ್ದೀರಾ? ವಂದೇ ಭಾರತ್‌ಗೆ ಚಾಲನೆ ವೇಳೆ ರೈಲ್ವೇ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ

Advertisements

“2025ರ ಜುಲೈ 22ರಂದು ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡುವಾಗ ಆಹಾರದಲ್ಲಿ ಕೀಟ ಕಂಡುಬಂದಿದೆ. ರೈಲು ಸಂಖ್ಯೆ 22440 c3 53 ಸೀಟ್ ಸಂಖ್ಯೆ” ಎಂದು ಎಕ್ಸ್‌ನಲ್ಲಿ ಪ್ರಯಾಣಿಕರು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್‌ಗೆ ರೈಲ್ವೆ ಪ್ರತಿಕ್ರಿಯೆ ನೀಡಿದೆ. “ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ! ದಯವಿಟ್ಟು ವಿವರಗಳು, ಪಿಎನ್‌ಆರ್ ಮತ್ತು ಮೊಬೈಲ್ ಸಂಖ್ಯೆ ಹಂಚಿಕೊಳ್ಳಿ. ತ್ವರಿತ ಪರಿಹಾರಕ್ಕಾಗಿ ನೀವು ನಿಮ್ಮ ಕಳವಳವನ್ನು ನೇರವಾಗಿ https://railmadad.indianrailways.gov.in ನಲ್ಲಿಯೂ ವ್ಯಕ್ತಪಡಿಸಬಹುದು” ಎಂದು ಹೇಳಿದೆ.

ಹಲವು ಮಂದಿ ಶುಚಿತ್ವದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. “ಬೇಸರದ ಸತ್ಯಾಂಶ ಏನೆಂದರೆ ಎಲ್ಲ ಭಾರತೀಯ ರೈಲುಗಳಲ್ಲಿ ಆಹಾರ ಕೆಳಮಟ್ಟದ್ದಾಗಿದೆ ಮತ್ತು ಶುಚಿಯಾಗಿರುವುದಿಲ್ಲ” ಎಂದು ನೆಟ್ಟಿಗರೊಬ್ಬರು ದೂರಿದ್ದಾರೆ. “ನೀವು ಯಾವಗಲೂ ಬರೀ ವಿಷಾಧ ವ್ಯಕ್ತಪಡಿಸುತ್ತೀರಿ. ಪಿಎನ್‌ಆರ್ ನೀಡುವಂತೆ ಕೇಳುತ್ತೀರಿ, ಆಮೇಲೆ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಳ್ಳುತ್ತೀರಿ” ಎಂದು ಇನ್ನೋರ್ವ ನೆಟ್ಟಿಗರು ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X