ಬಾಗಲಕೋಟೆ | ಪಿಎಚ್‌ಸಿಗೆ ಕಾಯಂ ವೈದ್ಯರ ನೇಮಕಕ್ಕೆ ಮೆಟಗುಡ್ಡ ಗ್ರಾಮಸ್ಥರ ಆಗ್ರಹ: ಟಿಎಚ್‌ಒ ಭರವಸೆ

Date:

Advertisements

ಪ್ರಾಥಮಿಕ ಆರೋಗ್ಯ ಕೇಂದ್ರ 24X7 ಸೇವೆಯ ಸಿಬ್ಬಂದಿ ನೇಮಕ ಮಾಡುವ ಮೂಲಕ ಕಾಯಂ ವೈದ್ಯರು ಉತ್ತಮ ಸೇವೆ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡದ ಗ್ರಾಮಸ್ಥರು, ಪಿಎಚ್‌ಸಿ ತಾಲೂಕು ಆರೋಗ್ಯಾಧಿಕಾರಿ ಡಾ ವೆಂಕಟೇಶ ಮಲಘಾಣ ಅವರಿಗೆ ಮನವಿ ಸಲ್ಲಿಸಿದರು.

“ಹಲಕಿ, ಮೆಟಗುಡ್ಡ, ನಿಂಗಾಪೂರ, ಚಿಚಖಂಡಿ ಕೆಡಿ, ಗುಲಗಾಲಜಂಬಗಿ, ರೂಗಿ, ಬಳ್ಳೂರು ಗ್ರಾಮಸ್ಥರು ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ. ಹಿಂದೆ ಈ ಆಸ್ಪತ್ರೆಯಲ್ಲಿ ವರ್ಷಕ್ಕೆ ನೂರಾರು ಹೆರಿಗೆ ಮಾಡಿಸಿ, ಜನರಿಗೆ ಅನುಕೂಲ ಕಲ್ಪಿಸಲಾಗಿತ್ತು. ಆದರೆ ಕಳೆದ ವರ್ಷದಿಂದ 24X7 ಸೇವೆ ಅಲಭ್ಯವಾಗಿದೆ. ಇದನ್ನು ಸರಿಪಡಿಸಬೇಕು ಮತ್ತು ವೈದ್ಯರನ್ನು ನೇಮಿಸಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಗುಲಬರ್ಗಾ ವಿವಿ : ಪ್ರಥಮ, ದ್ವಿತೀಯ, ತೃತೀಯ ರ‍್ಯಾಂಕ್ ಪಡೆದ ಕರ್ನಾಟಕ ಕಾಲೇಜಿನ ವಿದ್ಯಾರ್ಥಿನಿಯರು

ಈ ವೇಳೆ ಡಾ.ವೆಂಕಟೇಶ ಮಲಘಾಣ ಸ್ಥಳಕ್ಕೆ ಭೇಟಿ ನೀಡಿ, ಅಹವಾಲು ಸ್ವೀಕರಿಸಿ ಮುಂದಿನ ಕ್ರಮಕ್ಕೆ ಪ್ರಯತ್ನಿಸಲಾಗುವುದೆಂಬ ಭರವಸೆ ನೀಡಿದರು.

ಪ್ರಮುಖರಾದ ವೆಂಕಣ್ಣ ಹುನಸಿಕಟ್ಟಿ, ನ್ಯಾಯವಾದಿ ಯಲ್ಲಪ್ಪ ಹೆಗಡೆ, ಸಗರಪ್ಪ ಮಾಸರಡ್ಡಿ, ಸಿದ್ದಪ್ಪಮುಳ್ಳೂರ, ಇಸ್ಮಾಯಿಲ್ ಕರೋಲಿ, ರಮೇಶ ಹುನಸಿಕಟ್ಟಿ, ವೆಂಕಪ್ಪ ಯಾದವಾಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X