ಜಾತಿಗಣತಿ | ಕೇಂದ್ರ-ರಾಜ್ಯಕ್ಕೆ ಸಂಘರ್ಷವಿಲ್ಲ, ತಂತ್ರಜ್ಞಾನ ಬಳಸಿ 16 ದಿನದಲ್ಲಿ ಸಮೀಕ್ಷೆ: ಸಚಿವ ಪರಮೇಶ್ವರ್

Date:

Advertisements

ತಂತ್ರಜ್ಞಾನ ಉಪಯೋಗಿಸಿಕೊಂಡು 16 ದಿನಗಳಲ್ಲಿ ಜಾತಿ ಜನಗಣತಿ ಸಮೀಕ್ಷೆ ಮಾಡಬಹುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು‌.

ಸದಾಶಿವನಗರದ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಾತಿಗಣತಿ ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕು ಮತ್ತು ರಾಜ್ಯಕ್ಕೆ ಸಂಘರ್ಷ ಏನೂ ಇಲ್ಲ. ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡುತ್ತಿದ್ದೇವೆ. ರಾಜ್ಯದ ವತಿಯಿಂದ ನಮಗೆನು ಮಾನದಂಡಗಳಲ್ಲಿ ಬೇಕು ಅದನ್ನು ಮಾಡುತ್ತೇವೆ. ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಮೀಕ್ಷೆ ಮಾಡುವುದಿಲ್ಲ. ಯಾರು ಎಷ್ಟು ಜನ ಇದ್ದಾರೆ ಎಂಬ ಅಂಕಿ ಅಂಶವನ್ನು ಮಾತ್ರ ಕೇಂದ್ರ ಮಾಡುತ್ತದೆ” ಎಂದರು.

ಎಸ್ಐಟಿ ತಂಡದಿಂದ ಐಪಿಎಸ್ ಅಧಿಕಾರಿ ಹೊರಗುಳಿಯುವ ವಿಚಾರದ ಕುರಿತು ಮಾತನಾಡಿ, “ಅಧಿಕೃತವಾಗಿ ನನಗೆ ಅವರು ಮಾಹಿತಿ ತಿಳಿಸಿಲ್ಲ. ಆದರೆ ಅನ್‌ಅಫಿಷಿಯಲ್ ಆಗಿ ಅವರು ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣ ಇದೆ. ಹಾಗಾಗಿ ತಂಡದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಒಂದು ವೇಳೆ ಆ ರೀತಿ ಇದ್ದರೆ, ಅವರನ್ನು ಬದಲಾಯಿಸಲಾಗುವುದು” ಎಂದು ತಿಳಿಸಿದರು.‌

Advertisements

ಆಂಧ್ರಪ್ರದೇಶದಲ್ಲಿ ಬೆಂಗಳೂರಿನ ಬಿಜೆಪಿ ಮುಖಂಡರ ಹತ್ಯೆ ಪ್ರಕರಣದ‌ಕುರಿತು ಪ್ರತಿಕ್ರಿಯಿಸಿ, “ಆಂಧ್ರಪ್ರದೇಶ ಪೊಲೀಸರು ತನಿಖೆ ಮಾಡುತ್ತಾರೆ. ಹತ್ಯೆಯಾದವರು ನಮ್ಮ ರಾಜ್ಯದವರು ಆಗಿರುವುದರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡುತ್ತಾರೆ. ಆ ರಾಜ್ಯದ ಪೊಲೀಸರ ತನಿಖೆಗೆ ನಮ್ಮ ಪೊಲೀಸರು ಸಹಕಾರ ಮಾಡುತ್ತಾರೆ” ಎಂದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X