ಶಿರಸಿ | ಇಸ್ಪೀಟ್ ಅಡ್ಡೆ ಮೇಲೆ ಪೋಲಿಸರ ದಾಳಿ; 19 ಮಂದಿ ಅರೆಸ್ಟ್‌, ₹49.50 ಲಕ್ಷ ನಗದು ವಶಕ್ಕೆ

Date:

Advertisements

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಇಸ್ಪೀಟ್ ಆಟ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

Advertisements

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X