ಮಂಗಳೂರು | ಜುಲೈ 27ರಂದು ದಕ ಜಿಲ್ಲಾ ಮಹಿಳಾ ಸಮ್ಮೇಳನ

Date:

Advertisements

ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ 9ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಿರ್ಮಿಸಿರುವ ನಾಡೋಜ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 10:00 ಗಂಟೆಗೆ ಸಮ್ಮೇಳನವನ್ನು ಲೇಖಕಿ, ಪ್ರಾಧ್ಯಾಪಕಿ ಡಾ‌. ಸಬಿತಾ ಬನ್ನಾಡಿ ಉದ್ಘಾಟಿಸಲಿದ್ದಾರೆ. ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಖ್ಯಾತ ರಂಗ ಕಲಾವಿದೆ ಗೀತಾ ಸುರತ್ಕಲ್ ಸ್ವಾಗತ ಭಾಷಣ ಮಾಡಲಿದ್ದಾರೆ.‌ ಬರಹಗಾರರು, ಚಿಂತಕರೂ ಆಗಿರುವ ಚಂದ್ರಕಲಾ ನಂದಾವರ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ದೇವಿ, ಉಪಾಧ್ಯಕ್ಷೆ ಕೆ ಎಸ್ ಲಕ್ಷ್ಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿ ಅಧ್ಯಕ್ಷರಾದ ಫ್ಲೇವಿ ಕ್ರಾಸ್ತಾ ಅತ್ತಾವರರವರು ವಹಿಸಲಿದ್ದಾರೆ. ಉದ್ಘಾಟನಾ ಗೋಷ್ಟಿಯ ತರುವಾಯ ಪ್ರತಿನಿಧಿ ಅಧಿವೇಶನ ಜರುಗಲಿದ್ದು, ಜಿಲ್ಲೆಯಲ್ಲಿ ಮಹಿಳೆಯರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆದು, ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಬಲಿಷ್ಠವಾದ ಮಹಿಳಾ ಚಳವಳಿ ಕಟ್ಟಲು ನೂತನ‌ ನಾಯಕತ್ವವೂ ಕೂಡ ಈ ಸಮ್ಮೇಳನದಲ್ಲಿ ಹೊರಹೊಮ್ಮಲಿದೆ ಎಂದು JMS ಸಂಘಟನೆಯ ಪ್ರಕಟಣೆ ತಿಳಿಸಿದೆ.

Advertisements

ಇದನ್ನೂ ಓದಿ: ಮಂಗಳೂರು | ಸಾಹಿತ್ಯ ಕ್ಷೇತ್ರದಲ್ಲಿ ಫಗು ಹಳಕಟ್ಟಿಯವರ ಸಾಧನೆ ಅಪಾರ: ಪ್ರಭಾಕರ್‌ ನೀರ್ಮಾರ್ಗ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X