ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ: ‌ಡಿಸಿಎಂ ಡಿಕೆ ಶಿವಕುಮಾರ್

Date:

Advertisements
  • ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ?
  • ಆರೋಪದ ಬಗ್ಗೆ ದಾಖಲೆ ಇದ್ದರೆ ಬಹಿರಂಗಪಡಿಸಲಿ

ಎಚ್‌ ಡಿ ಕುಮಾರಸ್ವಾಮಿ ಕೈ ಕೆಳಗೆ ನಾನೂ ಕೆಲಸ ಮಾಡಿದ್ದೇನೆ. ಅಣ್ಣನ ವಿಚಾರ ತಮ್ಮನಿಗೆ ಗೊತ್ತಿರುವುದಿಲ್ಲವೇ? ಹೀಗಾಗಿ ಕುಮಾರಣ್ಣನ ಕುರಿತು ನನಗೂ ಒಂದಿಷ್ಟು ಮಾಹಿತಿ ಗೊತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಯಾವ ಕೇಂದ್ರ ಅಧಿಕಾರಿಗೂ, ಸಂಸ್ಥೆಗೂ ಹಣ ಕೊಡಬೇಕಿಲ್ಲ. ಅದಕ್ಕಾಗಿ ಬಿಡಿಎ ಅಧಿಕಾರಿಗಳಿಗೆ ನಾನು ಹಣ ಕೇಳಿಲ್ಲ. ಅಂತಹ ದಾಖಲೆಗಳು ಕುಮಾರಸ್ವಾಮಿ ಅವರ ಬಳಿ ಇದ್ದರೆ ಬಹಿರಂಗಪಡಿಸಲಿ” ಎಂದರು.

“ರಾಜ್ಯದಲ್ಲಿ ಯಾರು ಏನಂದಿದ್ದಾರೆ. ಅವರು ಏನು ಮಾಡಿದ್ದಾರೆ ಎಲ್ಲವೂ ನನಗೆ ಗೊತ್ತಿದೆ. ಆದರೆ, ನಾನು ಬಾಯಿ ಬಿಟ್ಟು ಏನೂ ಹೇಳುವುದಿಲ್ಲ. ಬೇರೆಯವರ ತರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾನು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ” ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿವಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೋಕ್ಸೊ ಕಾಯ್ದೆ ಬಂದರೂ ತಗ್ಗದ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ

“ಕುಮಾರಣ್ಣ ಏನೇ ದೂರಿದರೂ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರಲ್ಲಿ ದಾಖಲೆಗಳು ಇದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕೊಟ್ಟಿರುವ ಭರವಸೆ ಈಡೇರಿಸಲು ಎಲ್ಲ ತಯಾರಿ ಸಮೇತ ಸಜ್ಜಾಗಿದ್ದೇವೆ. ಅದು ನಮ್ಮ ವಿರೋಧಿಗಳಿಗೆ ಹಿಡಿಸುತ್ತಿಲ್ಲ. ನಾವೇನು ಮಾಡೋಣ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X