ರಾಯಚೂರು | ಶಿಕ್ಷಕರ ವರ್ಗಾವಣೆ; ಬದಲಿ ಶಿಕ್ಷಕರ ನೇಮಕಾತಿಗೆ ಆಗ್ರಹ

Date:

Advertisements

ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು.

ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಶಿಕ್ಷಕರ ಕೊರತೆಯ ಮಧ್ಯೆಯೂ ಶಿಕ್ಷಕರ ವರ್ಗಾವಣೆ ಮಾಡಲಾಗಿದೆ. ಶೇ.42.8ರಷ್ಟು ಶಿಕ್ಷಕರ ಕೊರತೆಯಾಗಿದೆ. ಅವೈಜ್ಞಾನಿಕ ವರ್ಗಾವಣೆಯಿಂದ ಶಿಕ್ಷಕರೇ ಇಲ್ಲದಂತಾಗಿದೆ. ದೇವದುರ್ಗ ತಾಲೂಕಿನ ಕೊತ್ತದೊಡ್ಡಿ ಶಾಲೆಯಲ್ಲಿ ಐದು ಮಂದಿ ಶಿಕ್ಷಕರಿದ್ದು, ನಾಲ್ಕು ಮಂದಿ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. 650 ಮಂದಿ ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಒಬ್ಬ ಶಿಕ್ಷಕರಿಂದ ಪಾಠ ಪ್ರವಚನ ಮಾಡಲು ಸಾಧ್ಯವೇ?” ಎಂದರು.

“ಕೆ.ಇರಬಗೇರಾ ಗ್ರಾಮದಲ್ಲಿ 7 ಮಂದಿ ಶಿಕ್ಷಕರಿದ್ದು, 6 ಮಂದಿ ಶಿಕ್ಷಕರನ್ನು ವರ್ಗ ಮಾಡಲಾಗಿದೆ. ಮಟ್ಲೇರದೊಡ್ಡಿ ಶಾಲೆಯಲ್ಲಿ ಇಬ್ಬರು ಶಿಕ್ಷಕರಿದ್ದು, ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ. ರಾಮನಾಳದಲ್ಲಿ ಇಬ್ಬರ ಶಿಕ್ಷಕರಲ್ಲಿ ಒಬ್ಬರ ವರ್ಗವಾಗಿ ಒಬ್ಬರು ಮಾತ್ರ ಉಳಿದಿದ್ದಾರೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಯಾರು ಹೆಚ್ಚು ಹಣ ಕೊಡುತ್ತಾರೋ ಅವರಿಗೆ ಪೋಸ್ಟಿಂಗ್‌: ಸರ್ಕಾರದ ವಿರುದ್ಧ ಪ್ರಲ್ಹಾದ್‌ ಜೋಶಿ ಆರೋಪ

ತಾಲೂಕು ಸೇರಿದಂತೆ ಜಿಲ್ಲೆಯ ಬಹುತೇಕ ತಾಲೂಕಗಳಲ್ಲಿಯೂ ಶಿಕ್ಷಕರಿಲ್ಲದೆ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ಬಂದು ನಿಂತಿದೆ. ಜಿಲ್ಲೆಯ ಎಲ್ಲ ಶಾಸಕರುಗಳು ಸರ್ಕಾರದ ಮೇಲೆ ಒತ್ತಡ ಹಾಕಿ ವರ್ಗಾವಣೆಯಾದ ಶಿಕ್ಷಕರ ಹುದ್ದೆಗೆ ಬದಲಿ ಶಿಕ್ಷಕರನ್ನು ನೇಮಿಸಲು ಒತ್ತಡ ಹಾಕಬೇಕು. ಕೆಲವು ಶಾಲೆಗಳು ಅತಿಥಿ ಶಿಕ್ಷಕರಿಂದ ನಡೆಯುತ್ತಿವೆ. ಕೂಡಲೇ ಶಿಕ್ಷಕರ ವರ್ಗಾವಣೆಯಿಂದ ಶಾಲೆಗಳು ಮುಚ್ಚಿ ಹೋಗುವ ಮುಂಚೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೊನ್ನಪ್ಪ ನಾಯಕ, ಸಾಬಣ್ಣ ನಾಯಕ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X